ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಫ್‌ಸಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ

Last Updated 14 ಫೆಬ್ರುವರಿ 2020, 15:31 IST
ಅಕ್ಷರ ಗಾತ್ರ

ತುಮಕೂರು: ಎಸ್‌ಎಫ್‌ಸಿ ವಿಶೇಷ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಪಾಲಿಕೆ ಸದಸ್ಯೆ ನಾಜೀಮಾ ಬೀ ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ಮನವಿ ಸಲ್ಲಿಸಿದ್ದಾರೆ.

2019–20ನೇ ಸಾಲಿನ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ಮಹಾನಗರ ಪಾಲಿಕೆಗೆ ₹15 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನಕ್ಕೆ ರೂಪಿಸಿರುವ ಕ್ರಿಯಾ ಯೋಜನೆಯಲ್ಲಿ ವಾರ್ಡ್‌ವಾರು ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಅವರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಮನವಿಗೆ ಸಂಬಂಧಿಸಿದಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮನವಿಯನ್ನು ಪಾಲಿಕೆ ಆಯುಕ್ತರಿಗೆ ರವಾನಿಸಿ, ಈ ಕುರಿತು ನಿಯಮಾನುಸಾರ ಕ್ರಮವಹಿಸಲು ಹಾಗೂ ತೆಗೆದುಕೊಂಡ ಕ್ರಮದ ಕುರಿತು ಸದಸ್ಯರಿಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT