ಘನ ತ್ಯಾಜ್ಯ ವಸ್ತುಗಳ ವಿಲೇವಾರಿ ಘಟಕದ ಬಳಿ ಕೆಲ ದಿನಗಳಿಂದ ಅಕ್ರಮವಾಗಿ ಗುಡಿಸಲುಗಳನ್ನು ಹಾಕಿಕೊಳ್ಳುತ್ತಿರುವ ವಿಷಯ ತಿಳಿದು ಸತ್ಯನಾರಾಯಣ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ‘ಈ ಸ್ಥಳ ದುರ್ವಾಸನೆಯಿಂದ ಕೂಡಿದ್ದು, ವಾಸ ಮಾಡಲು ಯೋಗ್ಯವಾಗಿಲ್ಲ. ಆದ್ದರಿಂದ ಬೇರೆ ಕಡೆ ನಿವೇಶನಗಳನ್ನು ನೀಡುವಾಗ ಅರ್ಹರಿಗೆ ಅನ್ಯಾಯವಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಭರವಸೆ ನೀಡಿದ್ದರು.