<p>ಶಿರಾ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಆಗಸ್ಟ್ 11ರಂದು ಬಂದ್ಗೆ ಕರೆ ನೀಡಿರುವುದಾಗಿ ರೈತಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಧನಂಜಯಾರಾಧ್ಯ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ವಿಂಟಲ್ಗೆ ₹ 18 ಸಾವಿರಕ್ಕೆ ಮಾರಾಟವಾಗುತ್ತಿದ್ದ ಉಂಡೆ ಕೊಬ್ಬರಿ ಈಗ ₹7,500 ಮಾರಾಟವಾಗುತ್ತಿದೆ. ಈ ಬಗ್ಗೆ ಸರ್ಕಾರ ಜಾಣ ಮೌನ ತಾಳಿದೆ ಎಂದರು.</p>.<p>ಕೇಂದ್ರ ಸರ್ಕಾರ ₹11,750 ಬೆಂಬಲ ಬೆಲೆ ನಿಗದಿ ಮಾಡಿದೆ. ಇದು ಅವೈಜ್ಞಾನಿಕ. ಸ್ವಾಮಿನಾಥನ್ ವರದಿಯಂತೆ ಉತ್ಪಾದನೆ ವೆಚ್ಚ ಮತ್ತು ಅರ್ಧದಷ್ಟು ಲಾಬಾಂಶ ಸೇರಿಸಿ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದರು.</p>.<p>ತೋಟಗಾರಿಕೆ ಇಲಾಖೆ ₹16,750 ಹಾಗೂ ರಾಜ್ಯದ ಕೃಷಿ ಬೆಲೆ ಆಯೋಗ ₹18 ಸಾವಿರ ಬೆಲೆ ನೀಡುವಂತೆ ವರದಿ ನೀಡಿದೆ. ತೆಂಗು ಬೆಳೆ ಹವಾಮಾನ ವೈಪರಿತ್ಯದಿಂದ ಅನೇಕ ರೋಗಗಳಿಗೆ ತುತ್ತಾಗಿ ಇಳುವರಿ ಕುಂಠಿತವಾಗಿದೆ. ರೈತರ ಜೀವನ ನಿರ್ವಹಣೆ ವೆಚ್ಚ ಹಾಗೂ ಉತ್ಪಾದನೆ ವೆಚ್ಚ ದುಬಾರಿಯಾಗಿರುವುದರಿಂದ ತೆಂಗು ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ₹25 ಸಾವಿರ ಬೆಂಬಲ ಬೆಲೆ ನಿಗದಿಪಡಿಸಬೇಕು. ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ತೆಂಗು ಬೆಳೆಗಾರರ ಹಿತ ಕಾಯಬೇಕು ಎಂದರು.</p>.<p>ರೈತಸಂಘದ ಉಪಾಧ್ಯಕ್ಷ ಕುದುರೆಕುಂಟೆ ಲಕ್ಕಣ್ಣ, ಜುಂಜಣ್ಣ, ಪರಮೇಶ್, ಪ್ರಭುಸ್ವಾಮಿ, ಕೃಷ್ಣಪ್ಪ ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಆಗಸ್ಟ್ 11ರಂದು ಬಂದ್ಗೆ ಕರೆ ನೀಡಿರುವುದಾಗಿ ರೈತಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಧನಂಜಯಾರಾಧ್ಯ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ವಿಂಟಲ್ಗೆ ₹ 18 ಸಾವಿರಕ್ಕೆ ಮಾರಾಟವಾಗುತ್ತಿದ್ದ ಉಂಡೆ ಕೊಬ್ಬರಿ ಈಗ ₹7,500 ಮಾರಾಟವಾಗುತ್ತಿದೆ. ಈ ಬಗ್ಗೆ ಸರ್ಕಾರ ಜಾಣ ಮೌನ ತಾಳಿದೆ ಎಂದರು.</p>.<p>ಕೇಂದ್ರ ಸರ್ಕಾರ ₹11,750 ಬೆಂಬಲ ಬೆಲೆ ನಿಗದಿ ಮಾಡಿದೆ. ಇದು ಅವೈಜ್ಞಾನಿಕ. ಸ್ವಾಮಿನಾಥನ್ ವರದಿಯಂತೆ ಉತ್ಪಾದನೆ ವೆಚ್ಚ ಮತ್ತು ಅರ್ಧದಷ್ಟು ಲಾಬಾಂಶ ಸೇರಿಸಿ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದರು.</p>.<p>ತೋಟಗಾರಿಕೆ ಇಲಾಖೆ ₹16,750 ಹಾಗೂ ರಾಜ್ಯದ ಕೃಷಿ ಬೆಲೆ ಆಯೋಗ ₹18 ಸಾವಿರ ಬೆಲೆ ನೀಡುವಂತೆ ವರದಿ ನೀಡಿದೆ. ತೆಂಗು ಬೆಳೆ ಹವಾಮಾನ ವೈಪರಿತ್ಯದಿಂದ ಅನೇಕ ರೋಗಗಳಿಗೆ ತುತ್ತಾಗಿ ಇಳುವರಿ ಕುಂಠಿತವಾಗಿದೆ. ರೈತರ ಜೀವನ ನಿರ್ವಹಣೆ ವೆಚ್ಚ ಹಾಗೂ ಉತ್ಪಾದನೆ ವೆಚ್ಚ ದುಬಾರಿಯಾಗಿರುವುದರಿಂದ ತೆಂಗು ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ₹25 ಸಾವಿರ ಬೆಂಬಲ ಬೆಲೆ ನಿಗದಿಪಡಿಸಬೇಕು. ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ತೆಂಗು ಬೆಳೆಗಾರರ ಹಿತ ಕಾಯಬೇಕು ಎಂದರು.</p>.<p>ರೈತಸಂಘದ ಉಪಾಧ್ಯಕ್ಷ ಕುದುರೆಕುಂಟೆ ಲಕ್ಕಣ್ಣ, ಜುಂಜಣ್ಣ, ಪರಮೇಶ್, ಪ್ರಭುಸ್ವಾಮಿ, ಕೃಷ್ಣಪ್ಪ ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>