<p>ಶಿರಾ: ತಾಲ್ಲೂಕಿನ ಗೌಡಗೆರೆ ಹೋಬಳಿಯ ಬೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆದಿಶಕ್ತಿ ಬೇವಿನ ಹಳ್ಳಮ್ಮ ದೇವಿ ಜಾತ್ರಾ ಮಹೋತ್ಸವ ನಡೆಯಿತು.</p>.<p>ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಟಿ.ಬಿ. ಜಯಚಂದ್ರ ಮಾತನಾಡಿ, ‘ದ್ವೇಷ, ಅಸೂಯೆ ಬಿಟ್ಟು ಎಲ್ಲರಲ್ಲೂ ನಾನೂ ಒಬ್ಬ ಎಂಬ ಭಾವನೆಯೊಂದಿಗೆ ಒಗ್ಗೂಡಿ ಜೀವನ ಕಟ್ಟಿಕೊಂಡಾಗ ಸಮಾಜದಲ್ಲಿ ನೆಮ್ಮದಿ ಮೂಡಲು ಸಾಧ್ಯ’ ಎಂದು ಹೇಳಿದರು.</p>.<p>ಬೇವಿನ ಹಳ್ಳಮ್ಮ ದೇವಸ್ಥಾನ ಅಭಿವೃದ್ಧಿಗೆ ₹10 ಲಕ್ಷ ನೀಡುವುದಾಗಿ ಭರವಸೆ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮಾತನಾಡಿ, ಬೇವಿನ ಹಳ್ಳಮ್ಮ ದೇವಸ್ಥಾನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸೂರ್ಯಬಿಂಬ ಯೋಜನೆಯಡಿ ಸೋಲಾರ್ ಹೈ ಮಾಸ್ಟ್ ದೀಪ ಹಾಕಿಸುವುದಾಗಿ ಹೇಳಿದರು.</p>.<p>ಮಾಜಿ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ, ಜೆಡಿಎಸ್ನ ಆರ್.ಉಗ್ರೇಶ್, ಕಲ್ಕೆರೆ ರವಿಕುಮಾರ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್, ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಹಳ್ಳಿಕಾರ ಸಮುದಾಯದ ಕೆ.ಎಂ.ನಾಗರಾಜು ಮಾತನಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ, ಪೊಲೀಸ್ ಎಸಿಪಿ ಮಂಜುನಾಥ್, ಸಾರಿಗೆ ಅಧಿಕಾರಿ ಮಂಜುನಾಥ್, ಡಾ.ಡಿ.ಎಂ.ಗೌಡ, ಬೆಟ್ಟಪ್ಪನಹಳ್ಳಿ ನಂದೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ನರಸಿಂಹೇಗೌಡ, ಕೃಷ್ಣೆ ಗೌಡ, ಬಿ.ಜಿ. ಶಿವಶಂಕರ, ಆನಂದ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-17-754438472</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ತಾಲ್ಲೂಕಿನ ಗೌಡಗೆರೆ ಹೋಬಳಿಯ ಬೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆದಿಶಕ್ತಿ ಬೇವಿನ ಹಳ್ಳಮ್ಮ ದೇವಿ ಜಾತ್ರಾ ಮಹೋತ್ಸವ ನಡೆಯಿತು.</p>.<p>ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಟಿ.ಬಿ. ಜಯಚಂದ್ರ ಮಾತನಾಡಿ, ‘ದ್ವೇಷ, ಅಸೂಯೆ ಬಿಟ್ಟು ಎಲ್ಲರಲ್ಲೂ ನಾನೂ ಒಬ್ಬ ಎಂಬ ಭಾವನೆಯೊಂದಿಗೆ ಒಗ್ಗೂಡಿ ಜೀವನ ಕಟ್ಟಿಕೊಂಡಾಗ ಸಮಾಜದಲ್ಲಿ ನೆಮ್ಮದಿ ಮೂಡಲು ಸಾಧ್ಯ’ ಎಂದು ಹೇಳಿದರು.</p>.<p>ಬೇವಿನ ಹಳ್ಳಮ್ಮ ದೇವಸ್ಥಾನ ಅಭಿವೃದ್ಧಿಗೆ ₹10 ಲಕ್ಷ ನೀಡುವುದಾಗಿ ಭರವಸೆ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮಾತನಾಡಿ, ಬೇವಿನ ಹಳ್ಳಮ್ಮ ದೇವಸ್ಥಾನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸೂರ್ಯಬಿಂಬ ಯೋಜನೆಯಡಿ ಸೋಲಾರ್ ಹೈ ಮಾಸ್ಟ್ ದೀಪ ಹಾಕಿಸುವುದಾಗಿ ಹೇಳಿದರು.</p>.<p>ಮಾಜಿ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ, ಜೆಡಿಎಸ್ನ ಆರ್.ಉಗ್ರೇಶ್, ಕಲ್ಕೆರೆ ರವಿಕುಮಾರ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್, ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಹಳ್ಳಿಕಾರ ಸಮುದಾಯದ ಕೆ.ಎಂ.ನಾಗರಾಜು ಮಾತನಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ, ಪೊಲೀಸ್ ಎಸಿಪಿ ಮಂಜುನಾಥ್, ಸಾರಿಗೆ ಅಧಿಕಾರಿ ಮಂಜುನಾಥ್, ಡಾ.ಡಿ.ಎಂ.ಗೌಡ, ಬೆಟ್ಟಪ್ಪನಹಳ್ಳಿ ನಂದೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ನರಸಿಂಹೇಗೌಡ, ಕೃಷ್ಣೆ ಗೌಡ, ಬಿ.ಜಿ. ಶಿವಶಂಕರ, ಆನಂದ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-17-754438472</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>