<p><strong>ಶಿರಾ</strong>: ಬಿಜೆಪಿಯಿಂದ ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕುಂಚಿಟಿಗರನ್ನು ಹೊರತು ಪಡಿಸಿ ಅಹಿಂದಾ ವರ್ಗದವರಿಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಮುಖಂಡ ಸಿ.ಎಂ. ನಾಗರಾಜು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಕುಂಚಿಟಿಗರಿಗಿಂತ ಅಹಿಂದಾ ವರ್ಗದವರೇ ಹೆಚ್ಚಾಗಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕುಂಚಿಟಿಗ ಸಮುದಾಯದವರಿಗೆ ಟಿಕೆಟ್ ನೀಡುವ ಮೂಲಕ ಅಹಿಂದಾ ವರ್ಗದವರಿಗೆ ಅನ್ಯಾಯ ಮಾಡುತ್ತಿದೆ. ಬಿಜೆಪಿ ಇಂತಹ ತಪ್ಪು ಮಾಡಬಾರದು’ ಎಂದರು.</p>.<p>ಹಿರಿಯೂರು ಕ್ಷೇತ್ರದ ಶಾಸಕ ಪೂರ್ಣಿಮಾ ಅವರ ಗಂಡ ಡಿ.ಟಿ.ಶ್ರೀನಿವಾಸ್ ಬಿಜೆಪಿಯಿಂದ ಸ್ಪರ್ಧಿಸಲು ಲಾಭಿ ಮಾಡುತ್ತಿದ್ದಾರೆ. ಇವರಿಗೆ ಟಿಕೆಟ್ ನೀಡಿದರೆ ಅಹಿಂದ ವರ್ಗದವರು ಯಾರೂ ಇವರಿಗೆ ಬೆಂಬಲ ನೀಡುವುದಿಲ್ಲ. ಅವರನ್ನು ಸೋಲಿಸುವುದೇ ನಮ್ಮ ಅಜೆಂಡಾವಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ಬಿಜೆಪಿಯಿಂದ ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕುಂಚಿಟಿಗರನ್ನು ಹೊರತು ಪಡಿಸಿ ಅಹಿಂದಾ ವರ್ಗದವರಿಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಮುಖಂಡ ಸಿ.ಎಂ. ನಾಗರಾಜು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಕುಂಚಿಟಿಗರಿಗಿಂತ ಅಹಿಂದಾ ವರ್ಗದವರೇ ಹೆಚ್ಚಾಗಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕುಂಚಿಟಿಗ ಸಮುದಾಯದವರಿಗೆ ಟಿಕೆಟ್ ನೀಡುವ ಮೂಲಕ ಅಹಿಂದಾ ವರ್ಗದವರಿಗೆ ಅನ್ಯಾಯ ಮಾಡುತ್ತಿದೆ. ಬಿಜೆಪಿ ಇಂತಹ ತಪ್ಪು ಮಾಡಬಾರದು’ ಎಂದರು.</p>.<p>ಹಿರಿಯೂರು ಕ್ಷೇತ್ರದ ಶಾಸಕ ಪೂರ್ಣಿಮಾ ಅವರ ಗಂಡ ಡಿ.ಟಿ.ಶ್ರೀನಿವಾಸ್ ಬಿಜೆಪಿಯಿಂದ ಸ್ಪರ್ಧಿಸಲು ಲಾಭಿ ಮಾಡುತ್ತಿದ್ದಾರೆ. ಇವರಿಗೆ ಟಿಕೆಟ್ ನೀಡಿದರೆ ಅಹಿಂದ ವರ್ಗದವರು ಯಾರೂ ಇವರಿಗೆ ಬೆಂಬಲ ನೀಡುವುದಿಲ್ಲ. ಅವರನ್ನು ಸೋಲಿಸುವುದೇ ನಮ್ಮ ಅಜೆಂಡಾವಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>