ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ: ಬಿಜೆಪಿಯಿಂದ ಕುಂಚಿಟಿಗರಿಗೆ ಟಿಕೆಟ್‌ ಬೇಡ- ಬಿಜೆಪಿ ಮುಖಂಡ

Last Updated 20 ಸೆಪ್ಟೆಂಬರ್ 2020, 2:23 IST
ಅಕ್ಷರ ಗಾತ್ರ

ಶಿರಾ: ಬಿಜೆಪಿಯಿಂದ ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕುಂಚಿಟಿಗರನ್ನು ಹೊರತು ಪಡಿಸಿ ಅಹಿಂದಾ ವರ್ಗದವರಿಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿ ಮುಖಂಡ ಸಿ.ಎಂ. ನಾಗರಾಜು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಕುಂಚಿಟಿಗರಿಗಿಂತ ಅಹಿಂದಾ ವರ್ಗದವರೇ ಹೆಚ್ಚಾಗಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕುಂಚಿಟಿಗ ಸಮುದಾಯದವರಿಗೆ ಟಿಕೆಟ್‌ ನೀಡುವ ಮೂಲಕ ಅಹಿಂದಾ ವರ್ಗದವರಿಗೆ ಅನ್ಯಾಯ ಮಾಡುತ್ತಿದೆ. ಬಿಜೆಪಿ ಇಂತಹ ತಪ್ಪು ಮಾಡಬಾರದು’ ಎಂದರು.

ಹಿರಿಯೂರು ಕ್ಷೇತ್ರದ ಶಾಸಕ ಪೂರ್ಣಿಮಾ ಅವರ ಗಂಡ ಡಿ.ಟಿ.ಶ್ರೀನಿವಾಸ್ ಬಿಜೆಪಿಯಿಂದ ಸ್ಪರ್ಧಿಸಲು ಲಾಭಿ ಮಾಡುತ್ತಿದ್ದಾರೆ. ಇವರಿಗೆ ಟಿಕೆಟ್ ನೀಡಿದರೆ ಅಹಿಂದ ವರ್ಗದವರು ಯಾರೂ ಇವರಿಗೆ ಬೆಂಬಲ ನೀಡುವುದಿಲ್ಲ. ಅವರನ್ನು ಸೋಲಿಸುವುದೇ ನಮ್ಮ ಅಜೆಂಡಾವಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT