<p><strong>ಶಿರಾ:</strong> ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಕ್ಷುಲ್ಲಕ ಕಾರಣಕ್ಕಾಗಿ ಸೋಮವಾರ ನಡೆದ ಜಗಳದಲ್ಲಿ ರಘು ಎನ್ನುವ ವ್ಯಕ್ತಿ ಗಾಯಗೊಂಡಿದ್ದಾನೆ.</p>.<p>ಕಬಾಬ್ ಅಂಗಡಿಯ ಬಳಿ ರಘು ಫೋನ್ಪೇ ಮಾಡುತ್ತೇನೆ ನಗದು ನೀಡಿ ಎಂದು ಕೇಳಿದ್ದಾನೆ. ಈ ಸಮಯದಲ್ಲಿ ಅಲ್ಲಿದ್ದ ಮುಸ್ತಾಫ್ ಹಾಗೂ ರಘು ನಡುವೆ ಜಗಳ ಪ್ರಾರಂಭವಾಗಿದೆ. ಮುಸ್ತಾಫ್ ರಘು ಮೇಲೆ ಚಾಕುವಿನಿಂದ ಇರಿಯಲು ಮುಂದಾದಾಗ ಕೈಗೆ ಗಾಯವಾಗಿದೆ. ಶಿರಾ ನಗರ ಠಾಣೆ ಪೊಲೀಸರು ಆರೋಪಿ ಮುಸ್ತಾಫನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಕಾರ್ಯಾಚರಣೆ: ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಬೀದಿಬದಿ ವ್ಯಾಪಾರಿಗಳು ಅಂಗಡಿ ಇಟ್ಟುಕೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾದರೆ ಪ್ರಕರಣ ದಾಖಲಿಸಲಾಗುವುದು ಎಂದು ಸೋಮವಾರ ನಗರಸಭೆ ಸಿಬ್ಬಂದಿ ಹಾಗೂ ಪೊಲೀಸರು ಬೀದಿಬದಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಭಾನುವಾರ ರಾತ್ರಿ ನಡೆದ ಘಟನೆಯಿಂದ ಎಚ್ಚೆತ್ತ ನಗರಸಭೆ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>.<p>ನಗರಸಭೆಯ ಪೌರಾಯುಕ್ತ ರುದ್ರೇಶ್ ಹಾಗೂ ಸಿಪಿಐ ಮಂಜೇಗೌಡ ನೇತೃತ್ವದಲ್ಲಿ ನಗರಸಭೆ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಂಚಾರಕ್ಕೆ ತೊಂದರೆಯಾಗದಂತೆ ಅಂಗಡಿಗಳಿಗೆ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಕ್ಷುಲ್ಲಕ ಕಾರಣಕ್ಕಾಗಿ ಸೋಮವಾರ ನಡೆದ ಜಗಳದಲ್ಲಿ ರಘು ಎನ್ನುವ ವ್ಯಕ್ತಿ ಗಾಯಗೊಂಡಿದ್ದಾನೆ.</p>.<p>ಕಬಾಬ್ ಅಂಗಡಿಯ ಬಳಿ ರಘು ಫೋನ್ಪೇ ಮಾಡುತ್ತೇನೆ ನಗದು ನೀಡಿ ಎಂದು ಕೇಳಿದ್ದಾನೆ. ಈ ಸಮಯದಲ್ಲಿ ಅಲ್ಲಿದ್ದ ಮುಸ್ತಾಫ್ ಹಾಗೂ ರಘು ನಡುವೆ ಜಗಳ ಪ್ರಾರಂಭವಾಗಿದೆ. ಮುಸ್ತಾಫ್ ರಘು ಮೇಲೆ ಚಾಕುವಿನಿಂದ ಇರಿಯಲು ಮುಂದಾದಾಗ ಕೈಗೆ ಗಾಯವಾಗಿದೆ. ಶಿರಾ ನಗರ ಠಾಣೆ ಪೊಲೀಸರು ಆರೋಪಿ ಮುಸ್ತಾಫನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಕಾರ್ಯಾಚರಣೆ: ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಬೀದಿಬದಿ ವ್ಯಾಪಾರಿಗಳು ಅಂಗಡಿ ಇಟ್ಟುಕೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾದರೆ ಪ್ರಕರಣ ದಾಖಲಿಸಲಾಗುವುದು ಎಂದು ಸೋಮವಾರ ನಗರಸಭೆ ಸಿಬ್ಬಂದಿ ಹಾಗೂ ಪೊಲೀಸರು ಬೀದಿಬದಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಭಾನುವಾರ ರಾತ್ರಿ ನಡೆದ ಘಟನೆಯಿಂದ ಎಚ್ಚೆತ್ತ ನಗರಸಭೆ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>.<p>ನಗರಸಭೆಯ ಪೌರಾಯುಕ್ತ ರುದ್ರೇಶ್ ಹಾಗೂ ಸಿಪಿಐ ಮಂಜೇಗೌಡ ನೇತೃತ್ವದಲ್ಲಿ ನಗರಸಭೆ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಂಚಾರಕ್ಕೆ ತೊಂದರೆಯಾಗದಂತೆ ಅಂಗಡಿಗಳಿಗೆ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>