<p><strong>ಶಿರಾ:</strong> ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಏನಾದರೂ ಹೆಸರು ಇಟ್ಟುಕೊಳ್ಳಲಿ ಅದರೆ ಅದರ ಮಹತ್ವವನ್ನು ಕೇಂದ್ರ ಸರ್ಕಾರ ಅರಿತು ಕೆಲಸ ಮಾಡಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.</p>.<p>ತಾಲ್ಲೂಕಿನ ಹುಯಿಲ್ ದೊರೆ ಗ್ರಾಮದಲ್ಲಿ ಬುಧವಾರ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಭಾಗಿತ್ವದ ಜಲಜೀವನ್ ಮನೆ ಮನೆ ಗಂಗೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಯೋಜನೆಯನ್ನು ಹಳ್ಳ ಹಿಡಿಸಿದ್ದಾರೆ. ಈಗ ಉದ್ಯೋಗ ಖಾತ್ರಿ ಯೋಜನೆಯನ್ನು ಹಳ್ಳ ಹಿಡಿಸುವ ಕೆಲಸ ಮಾಡಲು ಹೊರಟಿದ್ದು ಈ ಬಗ್ಗೆ ಎಲ್ಲರೂ ಎಚ್ಚರ ವಹಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ₹5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದ್ದು ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ. ಯೋಜನೆ ಜಾರಿಯಾದರೆ ಮಾತ್ರ ಶಿರಾ ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಭಿವೃದ್ಧಿಯಾಗುವುದು ಎಂದರು.</p>.<p>ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿ, ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಬಂದ ಅನುದಾನದಲ್ಲಿ ಬುಕ್ಕಾಪಟ್ಟಣ ಹೋಬಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಅರ್ಜಿ ಹಿಡಿದುಕೊಂಡು ಕೇಂದ್ರದ ಬಳಿ ಹೋಗದೆ ₹29 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಈಗ ಬಿಟ್ಟಿ ಭಾಗ್ಯಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಜನಪರ ಕಾಳಜಿ ಹೊಂದಿರುವ ಶಾಸಕ ಟಿ.ಬಿ.ಜಯಚಂದ್ರ ಅವರು ಇದರ ಬಗ್ಗೆ ಚಾಟಿ ಬೀಸಬೇಕು ಎಂದರು.</p>.<p>ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ತಾ.ಪಂ ಇಒ ಹರೀಶ್, ಗ್ರಾ.ಪಂ ಅಧ್ಯಕ್ಷೆ ರಾಜಮ್ಮ ಚಂದ್ರನಾಯ್ಕ, ಉಪಾಧ್ಯಕ್ಷೆ ಲಕ್ಷ್ಮಿ ತಿಮ್ಮಯ್ಯ, ಪಿಡಿಒ ಕನಕಪ್ಪ ಹನುಮಪ್ಪ ಮೇಲಸಕ್ರಿ, ಎಇಇ ರಾಜಣ್ಣ, ಮಂಜುಳಾಬಾಯಿ, ಶೇಷಾನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಏನಾದರೂ ಹೆಸರು ಇಟ್ಟುಕೊಳ್ಳಲಿ ಅದರೆ ಅದರ ಮಹತ್ವವನ್ನು ಕೇಂದ್ರ ಸರ್ಕಾರ ಅರಿತು ಕೆಲಸ ಮಾಡಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.</p>.<p>ತಾಲ್ಲೂಕಿನ ಹುಯಿಲ್ ದೊರೆ ಗ್ರಾಮದಲ್ಲಿ ಬುಧವಾರ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಭಾಗಿತ್ವದ ಜಲಜೀವನ್ ಮನೆ ಮನೆ ಗಂಗೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಯೋಜನೆಯನ್ನು ಹಳ್ಳ ಹಿಡಿಸಿದ್ದಾರೆ. ಈಗ ಉದ್ಯೋಗ ಖಾತ್ರಿ ಯೋಜನೆಯನ್ನು ಹಳ್ಳ ಹಿಡಿಸುವ ಕೆಲಸ ಮಾಡಲು ಹೊರಟಿದ್ದು ಈ ಬಗ್ಗೆ ಎಲ್ಲರೂ ಎಚ್ಚರ ವಹಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ₹5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದ್ದು ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ. ಯೋಜನೆ ಜಾರಿಯಾದರೆ ಮಾತ್ರ ಶಿರಾ ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಭಿವೃದ್ಧಿಯಾಗುವುದು ಎಂದರು.</p>.<p>ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿ, ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಬಂದ ಅನುದಾನದಲ್ಲಿ ಬುಕ್ಕಾಪಟ್ಟಣ ಹೋಬಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಅರ್ಜಿ ಹಿಡಿದುಕೊಂಡು ಕೇಂದ್ರದ ಬಳಿ ಹೋಗದೆ ₹29 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಈಗ ಬಿಟ್ಟಿ ಭಾಗ್ಯಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಜನಪರ ಕಾಳಜಿ ಹೊಂದಿರುವ ಶಾಸಕ ಟಿ.ಬಿ.ಜಯಚಂದ್ರ ಅವರು ಇದರ ಬಗ್ಗೆ ಚಾಟಿ ಬೀಸಬೇಕು ಎಂದರು.</p>.<p>ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ತಾ.ಪಂ ಇಒ ಹರೀಶ್, ಗ್ರಾ.ಪಂ ಅಧ್ಯಕ್ಷೆ ರಾಜಮ್ಮ ಚಂದ್ರನಾಯ್ಕ, ಉಪಾಧ್ಯಕ್ಷೆ ಲಕ್ಷ್ಮಿ ತಿಮ್ಮಯ್ಯ, ಪಿಡಿಒ ಕನಕಪ್ಪ ಹನುಮಪ್ಪ ಮೇಲಸಕ್ರಿ, ಎಇಇ ರಾಜಣ್ಣ, ಮಂಜುಳಾಬಾಯಿ, ಶೇಷಾನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>