<p><strong>ಶಿರಾ:</strong> ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ವಕೀಲರು ಅವರಿಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸೇರಿದ್ದಾರೆ. ಯಾವುದೇ ಅಸೆ, ಅಮಿಷಗಳಿಗೆ ಬಲಿಯಾಗಿಲ್ಲ ಎಂದು ವಕೀಲ ಆರ್.ಸರ್ವೇಶ್ ಹೇಳಿದರು.</p>.<p>ವಕೀಲಎಚ್.ಗುರುಮೂರ್ತಿ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ವಕೀಲರು ತೆರಳಿದ್ದರೇ, ಹೊರತು ಯಾವುದೇ ಸಾಲ ಪಡೆಯಲು ಅಲ್ಲ. ವಕೀಲರು ಸಾಲ ಪಡೆಯಲು ಬೆಂಗಳೂರಿಗೆ ಹೋಗುವ ಅಗತ್ಯ ಇಲ್ಲ ನಗರದಲ್ಲಿಯೇ ಬೇಕಾದಷ್ಟು ಬ್ಯಾಂಕುಗಳಿವೆ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷರು ಅಧಿಕಾರಾವಧಿ ಮುಕ್ತಾಯವಾಗಿದ್ದರೂ ತಾವೇ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಎಂದು ಸಿ.ಎಚ್.ಜಗದೀಶ್ ಹಾಗೂ ಸಣ್ಣಕರೇಗೌಡ ಸಂಘವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ವಕೀಲರು ರಾಜಕೀಯ ಪಕ್ಷಗಳಿಗೆ ಸೇರಲು ಸಂಘದ ಅನುಮತಿ ಪಡೆಯುವ ಅಗತ್ಯ ಇಲ್ಲ ಎಂದರು.</p>.<p>ಸಂಘದ ಅಧ್ಯಕ್ಷ ಹಾಗೂ ಕಾರ್ಯದರ್ಶಿಯಾಗಿದ್ದವರು ವಕೀಲರ ಬಗ್ಗೆ ಕೀಳಾಗಿ ಮಾತನಾಡುವ ಮೂಲಕ ವಕೀಲ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಇವರು ತಕ್ಷಣ ಬಹಿರಂಗವಾಗಿ ವಕೀಲರ ಕ್ಷಮೆಯಾಚಿಸಬೇಕು ಎಂದರು.</p>.<p>ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಜನರ ಒಲವಿರುವುದರಿಂದ ಹತಾಶರಾಗಿ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಇವರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಸದಸ್ಯರ ಜೊತೆ ವಕೀಲರ ಬಗ್ಗೆ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅವರು ಬಿಜೆಪಿ ಸೇರಲು ಮುಂದಾಗಿದ್ದು, ವಕೀಲರ ಬೆಂಬಲ ದೊರೆಯದ ಕಾರಣ ಈ ರೀತಿ ಮಾತನಾಡಿದ್ದಾರೆ ಎಂದರು.</p>.<p>ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ಜಿಲ್ಲಾ ನ್ಯಾಯಾಲಯ ಮಂಜೂರು ಮಾಡಿಸಿಕೊಡುವ ಭರವಸೆ ನೀಡಿದ್ದರು. ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕ ಜಿ.ಪರಮೇಶ್ವರ, ಕೆ.ಎನ್.ರಾಜಣ್ಣ ಅವರ ಜತೆ ಚರ್ಚಿಸಲು ಬೆಂಗಳೂರಿಗೆ ತೆರಳಿದ್ದು, ಅವರು ಸಕಾರಾತ್ಮಕವಾಗಿ ಸ್ವಂದಿಸಿದ ಕಾರಣ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆ ಎಂದರು.</p>.<p>ವಕೀಲರಾದ ಜಿ.ರಘು, ನಾಗರಾಜು, ಸಿದ್ದರಾಜು, ಈರಣ್ಣ, ಮಂಗಳಮ್ಮ, ವಿಶ್ವೇಶ್ವರಯ್ಯ, ವೈ.ಆರ್.ರವಿ, ಪುರುಷೋತ್ತಮ್, ಹೊನ್ನೇಶ್ ಗೌಡ, ವೆಂಕಟೇಶ್, ಜಗಧೀಶ್, ರಾಜು, ಮಂಗಳಮ್ಮ, ಶೋಭಾರಾಣಿ, ರಾಘವೇಂದ್ರ, ಪರಮೇಶ್, ಹನುಮಂತರಾಯಪ್ಪ, ಯತೀಶ್, ನರಸಿಂಹಮೂರ್ತಿ, ರಾಮಚಂದ್ರಪ್ಪ, ರಮೇಶ್, ರಂಗನಾಥ್ ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ವಕೀಲರು ಅವರಿಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸೇರಿದ್ದಾರೆ. ಯಾವುದೇ ಅಸೆ, ಅಮಿಷಗಳಿಗೆ ಬಲಿಯಾಗಿಲ್ಲ ಎಂದು ವಕೀಲ ಆರ್.ಸರ್ವೇಶ್ ಹೇಳಿದರು.</p>.<p>ವಕೀಲಎಚ್.ಗುರುಮೂರ್ತಿ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ವಕೀಲರು ತೆರಳಿದ್ದರೇ, ಹೊರತು ಯಾವುದೇ ಸಾಲ ಪಡೆಯಲು ಅಲ್ಲ. ವಕೀಲರು ಸಾಲ ಪಡೆಯಲು ಬೆಂಗಳೂರಿಗೆ ಹೋಗುವ ಅಗತ್ಯ ಇಲ್ಲ ನಗರದಲ್ಲಿಯೇ ಬೇಕಾದಷ್ಟು ಬ್ಯಾಂಕುಗಳಿವೆ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷರು ಅಧಿಕಾರಾವಧಿ ಮುಕ್ತಾಯವಾಗಿದ್ದರೂ ತಾವೇ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಎಂದು ಸಿ.ಎಚ್.ಜಗದೀಶ್ ಹಾಗೂ ಸಣ್ಣಕರೇಗೌಡ ಸಂಘವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ವಕೀಲರು ರಾಜಕೀಯ ಪಕ್ಷಗಳಿಗೆ ಸೇರಲು ಸಂಘದ ಅನುಮತಿ ಪಡೆಯುವ ಅಗತ್ಯ ಇಲ್ಲ ಎಂದರು.</p>.<p>ಸಂಘದ ಅಧ್ಯಕ್ಷ ಹಾಗೂ ಕಾರ್ಯದರ್ಶಿಯಾಗಿದ್ದವರು ವಕೀಲರ ಬಗ್ಗೆ ಕೀಳಾಗಿ ಮಾತನಾಡುವ ಮೂಲಕ ವಕೀಲ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಇವರು ತಕ್ಷಣ ಬಹಿರಂಗವಾಗಿ ವಕೀಲರ ಕ್ಷಮೆಯಾಚಿಸಬೇಕು ಎಂದರು.</p>.<p>ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಜನರ ಒಲವಿರುವುದರಿಂದ ಹತಾಶರಾಗಿ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಇವರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಸದಸ್ಯರ ಜೊತೆ ವಕೀಲರ ಬಗ್ಗೆ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅವರು ಬಿಜೆಪಿ ಸೇರಲು ಮುಂದಾಗಿದ್ದು, ವಕೀಲರ ಬೆಂಬಲ ದೊರೆಯದ ಕಾರಣ ಈ ರೀತಿ ಮಾತನಾಡಿದ್ದಾರೆ ಎಂದರು.</p>.<p>ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ಜಿಲ್ಲಾ ನ್ಯಾಯಾಲಯ ಮಂಜೂರು ಮಾಡಿಸಿಕೊಡುವ ಭರವಸೆ ನೀಡಿದ್ದರು. ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕ ಜಿ.ಪರಮೇಶ್ವರ, ಕೆ.ಎನ್.ರಾಜಣ್ಣ ಅವರ ಜತೆ ಚರ್ಚಿಸಲು ಬೆಂಗಳೂರಿಗೆ ತೆರಳಿದ್ದು, ಅವರು ಸಕಾರಾತ್ಮಕವಾಗಿ ಸ್ವಂದಿಸಿದ ಕಾರಣ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆ ಎಂದರು.</p>.<p>ವಕೀಲರಾದ ಜಿ.ರಘು, ನಾಗರಾಜು, ಸಿದ್ದರಾಜು, ಈರಣ್ಣ, ಮಂಗಳಮ್ಮ, ವಿಶ್ವೇಶ್ವರಯ್ಯ, ವೈ.ಆರ್.ರವಿ, ಪುರುಷೋತ್ತಮ್, ಹೊನ್ನೇಶ್ ಗೌಡ, ವೆಂಕಟೇಶ್, ಜಗಧೀಶ್, ರಾಜು, ಮಂಗಳಮ್ಮ, ಶೋಭಾರಾಣಿ, ರಾಘವೇಂದ್ರ, ಪರಮೇಶ್, ಹನುಮಂತರಾಯಪ್ಪ, ಯತೀಶ್, ನರಸಿಂಹಮೂರ್ತಿ, ರಾಮಚಂದ್ರಪ್ಪ, ರಮೇಶ್, ರಂಗನಾಥ್ ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>