<p><strong>ಶಿರಾ</strong>: ನಗರದ ಅಂಬೇಡ್ಕರ್ ಭವನದಲ್ಲಿ ಮಾರಕ್ಕ ಟೀಚರ್ ಸೇವಾ ಟ್ರಸ್ಟ್ ಉದ್ಘಾಟನೆ ಅಂಗವಾಗಿ ಪೌರ ಕಾರ್ಮಿಕರಿಗೆ ಉಚಿತ ಕಣ್ಣಿನ ತಪಾಸಣೆ, ಕನ್ನಡಕ ವಿತರಣೆ, ಮಧುಮೇಹ, ರಕ್ತದೊತ್ತದ ತಪಾಸಣೆ ಶಿಬಿರವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.</p>.<p>ನಗರಸಭೆ ಪೌರಾಯುಕ್ತ ಕೆ. ರುದ್ರೇಶ್ ಮಾತನಾಡಿ, ‘ಪೌರ ಕಾರ್ಮಿಕರು ಸಮಾಜದ ಬೆನ್ನೆಲುಬಾಗಿದ್ದು, ನಗರದ ಸ್ವಚ್ಛತೆ, ಆರೋಗ್ಯಕರ ವಾತಾವರಣಕ್ಕಾಗಿ ಅವರು ಹಗಲಿರುಳು ಎನ್ನದೆ ಶ್ರಮಿಸುತ್ತಿದ್ದಾರೆ’ ಎಂದು ಕೊಂಡಾಡಿದರು.</p>.<p>ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್ ಮಾತನಾಡಿ, ಮಾರಕ್ಕ ಅವರು ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯ ನಂತರವೂ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ ಎಂದರು.</p>.<p>ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೃಷ್ಣಪ್ಪ,ಮಾರಕ್ಕ ಟೀಚರ್ ಸೇವಾ ಟ್ರಸ್ಟ್ ಅಧ್ಯಕ್ಷೆ ಮಾರಕ್ಕ, ಗೌರವಾಧ್ಯಕ್ಷ ಬಾಲಕೃಷ್ಣೇಗೌಡ, ಕಾರ್ಯದರ್ಶಿ ಮಂಜುಳ ಯುವರಾಜ್, ನಿವೃತ್ತ ಶಿಕ್ಷಕ ಈರೇಗೌಡ, ದೇವರಾಜು, ದಶರಥ, ಅರುಣ್ ಯಾದವ್, ಯುವರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-17-278907808</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ನಗರದ ಅಂಬೇಡ್ಕರ್ ಭವನದಲ್ಲಿ ಮಾರಕ್ಕ ಟೀಚರ್ ಸೇವಾ ಟ್ರಸ್ಟ್ ಉದ್ಘಾಟನೆ ಅಂಗವಾಗಿ ಪೌರ ಕಾರ್ಮಿಕರಿಗೆ ಉಚಿತ ಕಣ್ಣಿನ ತಪಾಸಣೆ, ಕನ್ನಡಕ ವಿತರಣೆ, ಮಧುಮೇಹ, ರಕ್ತದೊತ್ತದ ತಪಾಸಣೆ ಶಿಬಿರವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.</p>.<p>ನಗರಸಭೆ ಪೌರಾಯುಕ್ತ ಕೆ. ರುದ್ರೇಶ್ ಮಾತನಾಡಿ, ‘ಪೌರ ಕಾರ್ಮಿಕರು ಸಮಾಜದ ಬೆನ್ನೆಲುಬಾಗಿದ್ದು, ನಗರದ ಸ್ವಚ್ಛತೆ, ಆರೋಗ್ಯಕರ ವಾತಾವರಣಕ್ಕಾಗಿ ಅವರು ಹಗಲಿರುಳು ಎನ್ನದೆ ಶ್ರಮಿಸುತ್ತಿದ್ದಾರೆ’ ಎಂದು ಕೊಂಡಾಡಿದರು.</p>.<p>ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್ ಮಾತನಾಡಿ, ಮಾರಕ್ಕ ಅವರು ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯ ನಂತರವೂ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ ಎಂದರು.</p>.<p>ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೃಷ್ಣಪ್ಪ,ಮಾರಕ್ಕ ಟೀಚರ್ ಸೇವಾ ಟ್ರಸ್ಟ್ ಅಧ್ಯಕ್ಷೆ ಮಾರಕ್ಕ, ಗೌರವಾಧ್ಯಕ್ಷ ಬಾಲಕೃಷ್ಣೇಗೌಡ, ಕಾರ್ಯದರ್ಶಿ ಮಂಜುಳ ಯುವರಾಜ್, ನಿವೃತ್ತ ಶಿಕ್ಷಕ ಈರೇಗೌಡ, ದೇವರಾಜು, ದಶರಥ, ಅರುಣ್ ಯಾದವ್, ಯುವರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-17-278907808</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>