<p>ಶಿರಾ: ನೆಲಮೂಲ ಸಂಸ್ಕೃತಿಯನ್ನು ಉಳಿಸಿ, ಮಹಿಳೆಯರಲ್ಲಿರುವ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಲು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಹೇಳಿದರು.</p>.<p>ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಭಾನುವಾರ ಸಿಎಂಜಿ ಅಭಿಮಾನಿ ಬಳಗ ಆಯೋಜಿಸಿದ್ದ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.</p>.<p>ಯುಗಾದಿ ಹಾಗೂ ಶ್ರೀರಾಮ ನವಮಿ ಪ್ರಯುಕ್ತ ರಂಗೋಲಿ ಸ್ಪರ್ಧೆಯನ್ನು ತಾಲ್ಲೂಕಿನಾದ್ಯಂತ ನಡೆಸಲಾಗುತ್ತಿದೆ. ಇದರಿಂದಾಗಿ ಗ್ರಾಮೀಣ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಲಾಗುತ್ತಿದೆ ಎಂದರು.</p>.<p>ಸ್ಪರ್ಧಾ ವಿಜೇತರು: ತಾವರೆಕೆರೆ ಗ್ರಾಮವನ್ನು ಮೂರು ವಾರ್ಡ್ಗಳಾಗಿ ವಿಂಗಡಿಸಿ 9 ಮಂದಿಗೆ ಬಹುಮಾನ ವಿತರಿಸಲಾಯಿತು. ರೋಜ, ಅನನ್ಯ ಸ್ನೇಹ, ಶರಣ್ಯ ಅವರಿಗೆ ಪ್ರಥಮ ಬಹುಮಾನ ತಲಾ ₹5 ಸಾವಿರ, ಆಶಾ ತಿಪ್ಪೇಶ್, ರಮ್ಯ, ಉಮಾ ಅವರಿಗೆ ದ್ವಿತೀಯ ಬಹುಮಾನ ತಲಾ ₹3 ಸಾವಿರ, ಸೃಷ್ಟಿ, ಮಂಜುಳಾ ನಾಗರಾಜು, ಶ್ರಾವಂತಿ ಅವರಿಗೆ ತೃತೀಯ ಬಹುಮಾನ ₹2 ಸಾವಿರ ನೀಡಲಾಯಿತು.</p>.<p>ಶಿವು ಸ್ನೇಹಪ್ರಿಯ, ಎಸ್ಡಿಎಂಸಿ ಸದಸ್ಯ ಶಿವಕುಮಾರ್, ಮಧು, ಸತ್ಯಭಾಮ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಈರಣ್ಣ ಪಟೇಲ್, ರಮೇಶ್, ಕುಮಾರ್ ಮಾಸ್ಟರ್, ನೇರಲಗುಡ್ಡ ಶಿವಕುಮಾರ್, ಮದ್ದಕ್ಕನಹಳ್ಳಿ ಗೌಡಪ್ಪ, ಗೋವಿಂದ, ರಾಜು, ಡಿ.ಎಚ್.ಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-17-572755110</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ನೆಲಮೂಲ ಸಂಸ್ಕೃತಿಯನ್ನು ಉಳಿಸಿ, ಮಹಿಳೆಯರಲ್ಲಿರುವ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಲು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಹೇಳಿದರು.</p>.<p>ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಭಾನುವಾರ ಸಿಎಂಜಿ ಅಭಿಮಾನಿ ಬಳಗ ಆಯೋಜಿಸಿದ್ದ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.</p>.<p>ಯುಗಾದಿ ಹಾಗೂ ಶ್ರೀರಾಮ ನವಮಿ ಪ್ರಯುಕ್ತ ರಂಗೋಲಿ ಸ್ಪರ್ಧೆಯನ್ನು ತಾಲ್ಲೂಕಿನಾದ್ಯಂತ ನಡೆಸಲಾಗುತ್ತಿದೆ. ಇದರಿಂದಾಗಿ ಗ್ರಾಮೀಣ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಲಾಗುತ್ತಿದೆ ಎಂದರು.</p>.<p>ಸ್ಪರ್ಧಾ ವಿಜೇತರು: ತಾವರೆಕೆರೆ ಗ್ರಾಮವನ್ನು ಮೂರು ವಾರ್ಡ್ಗಳಾಗಿ ವಿಂಗಡಿಸಿ 9 ಮಂದಿಗೆ ಬಹುಮಾನ ವಿತರಿಸಲಾಯಿತು. ರೋಜ, ಅನನ್ಯ ಸ್ನೇಹ, ಶರಣ್ಯ ಅವರಿಗೆ ಪ್ರಥಮ ಬಹುಮಾನ ತಲಾ ₹5 ಸಾವಿರ, ಆಶಾ ತಿಪ್ಪೇಶ್, ರಮ್ಯ, ಉಮಾ ಅವರಿಗೆ ದ್ವಿತೀಯ ಬಹುಮಾನ ತಲಾ ₹3 ಸಾವಿರ, ಸೃಷ್ಟಿ, ಮಂಜುಳಾ ನಾಗರಾಜು, ಶ್ರಾವಂತಿ ಅವರಿಗೆ ತೃತೀಯ ಬಹುಮಾನ ₹2 ಸಾವಿರ ನೀಡಲಾಯಿತು.</p>.<p>ಶಿವು ಸ್ನೇಹಪ್ರಿಯ, ಎಸ್ಡಿಎಂಸಿ ಸದಸ್ಯ ಶಿವಕುಮಾರ್, ಮಧು, ಸತ್ಯಭಾಮ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಈರಣ್ಣ ಪಟೇಲ್, ರಮೇಶ್, ಕುಮಾರ್ ಮಾಸ್ಟರ್, ನೇರಲಗುಡ್ಡ ಶಿವಕುಮಾರ್, ಮದ್ದಕ್ಕನಹಳ್ಳಿ ಗೌಡಪ್ಪ, ಗೋವಿಂದ, ರಾಜು, ಡಿ.ಎಚ್.ಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-17-572755110</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>