ತುಮಕೂರು: ನಗರದ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ ಎದುರಿನ ಶಿರಡಿ ಸಾಯಿಬಾಬಾ ನಗರದ ಸಾಯಿಬಾಬಾ ಮಂದಿರ ಟ್ರಸ್ಟ್ನ ಸಾಯಿಬಾಬಾ ಮಂದಿರದ 8ನೇ ವಾರ್ಷಿಕೋತ್ಸವ ಈಚೆಗೆನಡೆಯಿತು.
ಶಿರಡಿ ಸಾಯಿಬಾಬಾಮಂದಿರದಲ್ಲಿ ಬೆಳಿಗ್ಗೆ 6 ಗಂಟೆಗೆ ಕಾಕಡ ಆರತಿ, ಮಹಾ ಮಂಗಳಾರತಿ, ಕ್ಷೀರಾಭಿಷೇಕ, ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ ನಡೆಯಿತು.
ಸಂಜೆ ಸಾಯಿಬಾಬಾ ಅಷ್ಟೋತ್ತರ, ದೂಪ ಆರತಿ, ಸಾಯಿ ಭಜನೆ, ಶೇಜಾರತಿ ಮೊದಲಾದ ಧಾರ್ಮಿಕ ಕಾರ್ಯಕ್ರಮ ನಡೆದವು.
ಮಹಿಳಾ ಭಜನಾ ತಂಡದವರು ಅಷ್ಟೋತ್ತರ ಪಾರಾಯಣ ಮಾಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಶಿರಡಿ ಬಾಬಾ ಮಂದಿರಕ್ಕೆ ಪುಷ್ಪಾಲಂಕಾರ, ದೀಪಾಲಂಕಾರ ಮಾಡಲಾಗಿತ್ತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಭಕ್ತರು ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.