<p><strong>ಗುಬ್ಬಿ</strong>: ‘ರಾಜಕಾರಣಿಗಳು ವೀರಶೈವ ಮತ್ತು ಲಿಂಗಾಯತ ಧರ್ಮಗಳು ಬೇರೆ ಬೇರೆ ಎನ್ನುತ್ತಾ ಧರ್ಮವನ್ನು ಒಡೆಯಲು ಮುಂದಾಗಿರುವುದು ದುರಾದೃಷ್ಟಕರ’ ಎಂದು ರಂಭಾಪುರಿ ಪೀಠದ ರೇಣುಕಾ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ತಾಲ್ಲೂಕಿನ ನಿಟ್ಟೂರಿನಲ್ಲಿ ನಡೆದ ಗುಹೇಶ್ವರಸ್ವಾಮಿ ದೇಗುಲ ರಜತ ಮಹೋತ್ಸವ, ರೇಣುಕಾ ಜಯಂತಿ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಮಾತನಾಡಿದರು.</p>.<p>ಮಾನವ ಧರ್ಮ ಉದ್ದಾರಕ್ಕಾಗಿ ರೇಣುಕಾಚಾರ್ಯ ಸ್ಥಾಪಿಸಿದ ವೀರಶೈವ ಧರ್ಮವನ್ನು 12ನೇ ಶತಮಾನದಲ್ಲಿ ಬಸವೇಶ್ವರರು ಉತ್ತುಂಗಕ್ಕೆ ಕೊಂಡೊಯ್ದಿದ್ದಾರೆ. ವೀರಶೈವ- ಲಿಂಗಾಯತ ಧರ್ಮ ಒಂದೇ ಆಗಿದ್ದು, ಅದನ್ನು ಒಡೆಯಲು ಬಿಡುವುದಿಲ್ಲ. ಸಮುದಾಯ ಒಗ್ಗಟ್ಟಿನಿಂದ ಇದ್ದು ಧರ್ಮವನ್ನು ಉಳಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.</p>.<p>‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕದಲ್ಲಿ ಲಿಂಗಾಯತ ಧರ್ಮಸ್ಥಾಪಕ ಬಸವಣ್ಣ ಎಂದು ಹೇಳುವ ಮೂಲಕ ಅಪಚಾರ ಎಸಗಿದ್ದಾರೆ. ಸರ್ಕಾರ ಅದನ್ನು ಸರಿಪಡಿಸಲು ಮುಂದಾಗದಿದ್ದರೆ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮನುಕುಲದ ಉದ್ಧಾರಕ್ಕಾಗಿ ಪವಾಡ ಪುರುಷರು, ಶರಣರು ಧರ್ಮಕ್ಕೆ ಉತ್ತಮ ಅಡಿಪಾಯ ಹಾಕಿದ್ದರಿಂದಲೇ ವಿದೇಶಿಯರು ಭಾರತದ ಮೇಲೆ ಅನೇಕಬಾರಿ ದಾಳಿ ನಡೆಸಿದರೂ, ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ದೊಡ್ಡಗುಣಿ ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವೀರಶೈವ ಲಿಂಗಾಯತ ಧರ್ಮದಲ್ಲಿ ವಿಶ್ವದ ಎಲ್ಲ ಧರ್ಮಗಳ ಸಾರವನ್ನು ಕಾಣಲು ಸಾಧ್ಯವಿದೆ ಎಂದು ಹೇಳಿದರು.</p>.<p>ತೇವಡೀಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಗುರುವಿಗೆ ಆದ್ಯತೆ ನೀಡುವ ವೀರಶೈವ ಲಿಂಗಾಯತ ಧರ್ಮ ಕಾಯಕ ತತ್ವ, ತ್ರಿವಿಧ ದಾಸೋಹ ಪರಿಕಲ್ಪನೆಯನ್ನು ವಿಶ್ವಕ್ಕೆ ಪರಿಚಯಿಸುವ ಮೂಲಕ ವಿಶ್ವ ಶ್ರೇಷ್ಠತೆ ತೋರಿದೆ ಎಂದು ಹೇಳಿದರು.</p>.<p>ರಂಭಾಪುರಿ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿತ್ತು. ನೊಣವಿನಕೆರೆ ಮಠದ ಕಿರಿಯ ಸ್ವಾಮೀಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶಶಿ ಹುಲಿಕುಂಟೆ, ಮುಖಂಡರಾದ ಡಿ.ಎಸ್. ಕುಮಾರ್, ಸಿದ್ಧಲಿಂಗಸ್ವಾಮಿ, ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ‘ರಾಜಕಾರಣಿಗಳು ವೀರಶೈವ ಮತ್ತು ಲಿಂಗಾಯತ ಧರ್ಮಗಳು ಬೇರೆ ಬೇರೆ ಎನ್ನುತ್ತಾ ಧರ್ಮವನ್ನು ಒಡೆಯಲು ಮುಂದಾಗಿರುವುದು ದುರಾದೃಷ್ಟಕರ’ ಎಂದು ರಂಭಾಪುರಿ ಪೀಠದ ರೇಣುಕಾ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ತಾಲ್ಲೂಕಿನ ನಿಟ್ಟೂರಿನಲ್ಲಿ ನಡೆದ ಗುಹೇಶ್ವರಸ್ವಾಮಿ ದೇಗುಲ ರಜತ ಮಹೋತ್ಸವ, ರೇಣುಕಾ ಜಯಂತಿ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಮಾತನಾಡಿದರು.</p>.<p>ಮಾನವ ಧರ್ಮ ಉದ್ದಾರಕ್ಕಾಗಿ ರೇಣುಕಾಚಾರ್ಯ ಸ್ಥಾಪಿಸಿದ ವೀರಶೈವ ಧರ್ಮವನ್ನು 12ನೇ ಶತಮಾನದಲ್ಲಿ ಬಸವೇಶ್ವರರು ಉತ್ತುಂಗಕ್ಕೆ ಕೊಂಡೊಯ್ದಿದ್ದಾರೆ. ವೀರಶೈವ- ಲಿಂಗಾಯತ ಧರ್ಮ ಒಂದೇ ಆಗಿದ್ದು, ಅದನ್ನು ಒಡೆಯಲು ಬಿಡುವುದಿಲ್ಲ. ಸಮುದಾಯ ಒಗ್ಗಟ್ಟಿನಿಂದ ಇದ್ದು ಧರ್ಮವನ್ನು ಉಳಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.</p>.<p>‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕದಲ್ಲಿ ಲಿಂಗಾಯತ ಧರ್ಮಸ್ಥಾಪಕ ಬಸವಣ್ಣ ಎಂದು ಹೇಳುವ ಮೂಲಕ ಅಪಚಾರ ಎಸಗಿದ್ದಾರೆ. ಸರ್ಕಾರ ಅದನ್ನು ಸರಿಪಡಿಸಲು ಮುಂದಾಗದಿದ್ದರೆ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮನುಕುಲದ ಉದ್ಧಾರಕ್ಕಾಗಿ ಪವಾಡ ಪುರುಷರು, ಶರಣರು ಧರ್ಮಕ್ಕೆ ಉತ್ತಮ ಅಡಿಪಾಯ ಹಾಕಿದ್ದರಿಂದಲೇ ವಿದೇಶಿಯರು ಭಾರತದ ಮೇಲೆ ಅನೇಕಬಾರಿ ದಾಳಿ ನಡೆಸಿದರೂ, ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ದೊಡ್ಡಗುಣಿ ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವೀರಶೈವ ಲಿಂಗಾಯತ ಧರ್ಮದಲ್ಲಿ ವಿಶ್ವದ ಎಲ್ಲ ಧರ್ಮಗಳ ಸಾರವನ್ನು ಕಾಣಲು ಸಾಧ್ಯವಿದೆ ಎಂದು ಹೇಳಿದರು.</p>.<p>ತೇವಡೀಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಗುರುವಿಗೆ ಆದ್ಯತೆ ನೀಡುವ ವೀರಶೈವ ಲಿಂಗಾಯತ ಧರ್ಮ ಕಾಯಕ ತತ್ವ, ತ್ರಿವಿಧ ದಾಸೋಹ ಪರಿಕಲ್ಪನೆಯನ್ನು ವಿಶ್ವಕ್ಕೆ ಪರಿಚಯಿಸುವ ಮೂಲಕ ವಿಶ್ವ ಶ್ರೇಷ್ಠತೆ ತೋರಿದೆ ಎಂದು ಹೇಳಿದರು.</p>.<p>ರಂಭಾಪುರಿ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿತ್ತು. ನೊಣವಿನಕೆರೆ ಮಠದ ಕಿರಿಯ ಸ್ವಾಮೀಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶಶಿ ಹುಲಿಕುಂಟೆ, ಮುಖಂಡರಾದ ಡಿ.ಎಸ್. ಕುಮಾರ್, ಸಿದ್ಧಲಿಂಗಸ್ವಾಮಿ, ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>