ಕೋವಿಡ್ ಮೂರನೇ ಅಲೆ ಹೆಚ್ಚುತ್ತಿರುವುದರಿಂದ ಮಠದ ಆವರಣದಲ್ಲಿ ಹೆಚ್ಚಿನ ಜನ ಸೇರುವುದಕ್ಕೆ ಯಾವುದೇ ಅವಕಾಶ ನೀಡಿರಲಿಲ್ಲ. ಮಠದಲ್ಲಿ ಯಾವುದೇ ರೀತಿಯ ಜಾತ್ರೆ, ಉತ್ಸವ, ವೇದಿಕೆ ಕಾರ್ಯಕ್ರಮ, ಸಮಾರಂಭಗಳಿಗೆ ಅವಕಾಶ ಕಲ್ಪಿಸಿರಲಿಲ್ಲ. ಹೀಗಾಗಿ ಮಠಕ್ಕೆ ಆಗಮಿಸುವ ಭಕ್ತರ ಸಂಖ್ಯೆಯೂ ತೀರಾ ವಿರಳವಾಗಿತ್ತು. ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸಿ.ಎಂ.ರಾಜೇಶ್ಗೌಡ, ಮುಖಂಡರಾದ ಸೊಗಡು ಶಿವಣ್ಣ, ಸುರೇಶ್ ಗೌಡ ಮತ್ತು ಅಧಿಕಾರಿಗಳು ಸ್ವಾಮೀಜಿಯ ಗದ್ದುಗೆಯ ದರ್ಶನ ಪಡೆದರು.