<p><strong>ತುಮಕೂರು:</strong> ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 111 ಅಡಿ ಎತ್ತರದ ಪ್ರತಿಮೆ ಸ್ಥಾಪಿಸುವಂತೆ ಒತ್ತಾಯಿಸಿ ಸೋಮವಾರ ನಗರದ ಎಪಿಎಂಸಿ ಆವರಣದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು.</p>.<p>ಕನ್ನಡ ಪರ ಸಂಘಟನೆಗಳ ಮುಖಂಡ ಧನಿಯಾಕುಮಾರ್ ಮಾತನಾಡಿ, ‘ಶಿವಕುಮಾರ ಸ್ವಾಮೀಜಿ ಅವರ 111 ಅಡಿ ಪ್ರತಿಮೆಯನ್ನು ನಗರದಲ್ಲಿ ಸ್ಥಾಪಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗುರು ಕಾರುಣ್ಯವನ್ನು ಶ್ರೀಗಳು ಇಲ್ಲಿಂದಲೇ ಪ್ರಾರಂಭಿಸುತ್ತಿದ್ದರು. ಆದ ಕಾರಣ ಎಪಿಎಂಸಿಯಿಂದ ಅಭಿಯಾನ ಪ್ರಾರಂಭಿಸಲಾಗಿದೆ. ನಗರದ ಎಲ್ಲೆಡೆ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ವರ್ತಕರು, ಹಮಾಲಿಗಳಿಂದ ಸಹಿ ಸಂಗ್ರಹಿಸಲಾಗುತ್ತಿದೆ. ನಗರದ ಎಲ್ಲ ವಾರ್ಡ್ಗಳಲ್ಲಿಯೂ ಶ್ರೀಗಳ ಭಕ್ತರು ಹಾಗೂ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿ, ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.</p>.<p>ಸಾಹಿತಿ ಕವಿತಾಕೃಷ್ಣ, ಶೀಘ್ರವಾಗಿ ಪ್ರತಿಮೆ ಸ್ಥಾಪಿಸುವ ನಿಟ್ಟಿನಲ್ಲಿ ಎಲ್ಲರು ಒತ್ತಡ ಹಾಕಬೇಕು. ಈ ಹಿನ್ನೆಲೆಯಲ್ಲಿ ಅಭಿಯಾನ ನಡೆಸಲಾಗುತ್ತಿದೆ ಎಂದರು.</p>.<p>ಕೋರಿ ಮಂಜುನಾಥ್, ಬಸವರಾಜು, ಮೋಹನ್ ಪಟೇಲ್, ಎಪಿಎಂಸಿ ಮಾಜಿ ಸದಸ್ಯ ಬಸವರಾಜು, ಚೇತನ್, ಅನಿಲ್, ಸುನೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 111 ಅಡಿ ಎತ್ತರದ ಪ್ರತಿಮೆ ಸ್ಥಾಪಿಸುವಂತೆ ಒತ್ತಾಯಿಸಿ ಸೋಮವಾರ ನಗರದ ಎಪಿಎಂಸಿ ಆವರಣದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು.</p>.<p>ಕನ್ನಡ ಪರ ಸಂಘಟನೆಗಳ ಮುಖಂಡ ಧನಿಯಾಕುಮಾರ್ ಮಾತನಾಡಿ, ‘ಶಿವಕುಮಾರ ಸ್ವಾಮೀಜಿ ಅವರ 111 ಅಡಿ ಪ್ರತಿಮೆಯನ್ನು ನಗರದಲ್ಲಿ ಸ್ಥಾಪಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗುರು ಕಾರುಣ್ಯವನ್ನು ಶ್ರೀಗಳು ಇಲ್ಲಿಂದಲೇ ಪ್ರಾರಂಭಿಸುತ್ತಿದ್ದರು. ಆದ ಕಾರಣ ಎಪಿಎಂಸಿಯಿಂದ ಅಭಿಯಾನ ಪ್ರಾರಂಭಿಸಲಾಗಿದೆ. ನಗರದ ಎಲ್ಲೆಡೆ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ವರ್ತಕರು, ಹಮಾಲಿಗಳಿಂದ ಸಹಿ ಸಂಗ್ರಹಿಸಲಾಗುತ್ತಿದೆ. ನಗರದ ಎಲ್ಲ ವಾರ್ಡ್ಗಳಲ್ಲಿಯೂ ಶ್ರೀಗಳ ಭಕ್ತರು ಹಾಗೂ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿ, ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.</p>.<p>ಸಾಹಿತಿ ಕವಿತಾಕೃಷ್ಣ, ಶೀಘ್ರವಾಗಿ ಪ್ರತಿಮೆ ಸ್ಥಾಪಿಸುವ ನಿಟ್ಟಿನಲ್ಲಿ ಎಲ್ಲರು ಒತ್ತಡ ಹಾಕಬೇಕು. ಈ ಹಿನ್ನೆಲೆಯಲ್ಲಿ ಅಭಿಯಾನ ನಡೆಸಲಾಗುತ್ತಿದೆ ಎಂದರು.</p>.<p>ಕೋರಿ ಮಂಜುನಾಥ್, ಬಸವರಾಜು, ಮೋಹನ್ ಪಟೇಲ್, ಎಪಿಎಂಸಿ ಮಾಜಿ ಸದಸ್ಯ ಬಸವರಾಜು, ಚೇತನ್, ಅನಿಲ್, ಸುನೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>