ತುಮಕೂರು: ‘ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಸರಿಯಾದ ರೀತಿಯಲ್ಲಿಯೇ ನಡೆಯುತ್ತಿದೆ. ಚೆನ್ನೈನ ರೇಲಾ ಆಸ್ಪತ್ರೆ, ಬಿಜಿಎಸ್ ಆಸ್ಪತ್ರೆ, ಸಿದ್ಧಗಂಗಾ ಆಸ್ಪತ್ರೆಯ ವೈದ್ಯರ ತಂಡ ನಿರಂತರ ಸಂಪರ್ಕದಲ್ಲಿದ್ದೇವೆ. ಇಂದು ತಪಾಸಣೆ ಮಾಡುವಾಗ ಸ್ವಾಮೀಜಿಯವರು ಮಠಕ್ಕೆ ತೆರಳುವ ಅಪೇಕ್ಷೆ ವ್ಯಕ್ತಪಡಿಸಿದರು. ಸೋಂಕು ಪೂರ್ಣ ನಿವಾರಣೆಯಾದ ಬಳಿಕ ಹೋಗಬಹುದು ಎಂದು ಮನವರಿಕೆ ಮಾಡಿದ್ದೇವೆ’ ಎಂದು ಬಿಜಿಎಸ್ ಆಸ್ಪತ್ರೆ ವೈದ್ಯರಾದ ಡಾ.ರವೀಂದ್ರ ಹಾಗೂ ಡಾ.ವೆಂಕಟರಮಣ ಹೇಳಿದರು.