ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ ಸ್ವಾಮೀಜಿ ಆರೋಗ್ಯ ಏರುಪೇರು: ಉಸಿರಾಟ ತೊಂದರೆ

Last Updated 21 ಜನವರಿ 2019, 4:48 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾ ಮಠದಶಿವಕುಮಾರ ಸ್ವಾಮೀಜಿ ಅವರಆರೋಗ್ಯದಲ್ಲಿ ಏರುಪೇರಾಗಿದೆ. ಸಹಜವಾಗಿ ಉಸಿರಾಟ ನಡೆಸುತ್ತಿದ್ದ ಸ್ವಾಮೀಜಿ ಅವರಿಗೆ ಸೋಮವಾರ ನಸುಕಿನಲ್ಲಿಉಸಿರಾಟದತೊಂದರೆ ಕಾಣಿಸಿಕೊಂಡಿದೆ. ಸಿದ್ಧಗಂಗಾ ಆಸ್ಪತ್ರೆಯ ಡಾ.ಪರಮೇಶ್ ನೇತೃತ್ವದ ತಂಡ ಸ್ವಾಮೀಜಿಗೆ ಚಿಕಿತ್ಸೆ ನೀಡುತ್ತಿದೆ.

ಭಾನುವಾರ ಸ್ವಾಮೀಜಿ ಅವರ ಆರೋಗ್ಯ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಬೆಂಗಳೂರಿನ ಬಿಜಿಎಸ್ ಆಸ್ಪತ್ರೆ ವೈದ್ಯರಾದ ಡಾ.ರವೀಂದ್ರ ಹಾಗೂ ಡಾ.ವೆಂಕಟರಮಣ,‘ಶಿವಕುಮಾರ ಸ್ವಾಮೀಜಿ ಸ್ವಲ್ಪ ಸಮಯ ಮಾತ್ರ ಸಹಜವಾಗಿ ಉಸಿರಾಡುತ್ತಿದ್ದಾರೆ. ಉಳಿದಂತೆ ಕೃತಕ ಉಸಿರಾಟ ಅನಿವಾರ್ಯವಾಗಿದ್ದು ಆರೋಗ್ಯದಲ್ಲಿ ನಿರೀಕ್ಷಿತ ಚೇತರಿಕೆ ಕಾಣಿಸುತ್ತಿಲ್ಲ’ ಎಂದು ಹೇಳಿದ್ದರು.

‘ಅಲ್ಬುಮಿನ್ ಪೋಷಕಾಂಶವನ್ನು ಬಾಹ್ಯವಾಗಿ ನೀಡುತ್ತಿದ್ದರೂ ದೇಹದಲ್ಲಿ ಪೋಷಕಾಂಶದ ಪ್ರಮಾಣ ಹೆಚ್ಚುತ್ತಿಲ್ಲ. ಕೆಲವು ಪರೀಕ್ಷೆಗಳ ನಂತರ ಔಷಧಿ ಬದಲಾವಣೆ ಮಾಡಲಾಗಿದೆ. ಈಗ ಕೆಲವು ಜೀವಸತ್ವ ನೀಡುತ್ತಿದ್ದೇವೆ’ ಎಂದರು.

‘ಸ್ವಾಮೀಜಿ ಅವರ ನಾಡಿಮಿಡಿತ ಪರೀಕ್ಷಿಸಿದ್ದೇವೆ. ಹೆಚ್ಚಿನ ಸ್ಪಂದನೆ ಕಾಣಿಸುತ್ತಿಲ್ಲ. ಕೈ, ಕಾಲನ್ನು ಕೆಲವು ವೇಳೆ ಅಲುಗಾಡಿಸುತ್ತಾರೆ. ಉಳಿದ ಸಮಯ ಯಥಾಸ್ಥಿತಿಯಲ್ಲಿಯೇ ಇರುತ್ತಾರೆ’ ಎಂದು ತಿಳಿಸಿದರು.

ಭಾನುವಾರ ರಜಾ ದಿನವಾದ ಕಾರಣ ನಾಡಿನ ವಿವಿಧ ಕಡೆಯಿಂದ ಹೆಚ್ಚಿನ ಭಕ್ತರು ದರ್ಶನಕ್ಕೆ ಬಂದಿದ್ದರು. ಮಠದ ಸಿಬ್ಬಂದಿ ಮತ್ತು ಪೊಲೀಸರು ಕಿಟಕಿ ಮೂಲಕ ಸ್ವಾಮೀಜಿ ಅವರ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದರು. ಸ್ವಾಮೀಜಿ ಅವರ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿ ಭಕ್ತರು ಅವರತ್ತ ಕೈ ಮುಗಿಯುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT