<p>ತುಮಕೂರು: ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜಯಂತಿ ಕಾರ್ಯಕ್ರಮ ಏ.1ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಭಾನುವಾರ ಇಲ್ಲಿ ಹೇಳಿದರು.</p>.<p>ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, ಮಕ್ಕಳಿಗೆ ತೊಂದರೆಯಾಗದಂತೆ ಸಂಜೆ ಯಾವುದೇ ಕಾರ್ಯಕ್ರಮ ಆಯೋಜಿಸಿಲ್ಲ. ವೇದಿಕೆ ಕಾರ್ಯಕ್ರಮದ ಬಳಿಕ ವೀಣಾವಾದನ ಹಾಗೂ 119 ಮಹಿಳೆಯರಿಂದ ವಚನ ಗಾಯನ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಕಾರ್ಯಕ್ರಮ ನಡೆಯಲಿದೆ. ಎಪಿಎಂಸಿ ಕಡೆಯಿಂದ ಬರುವ ಭಕ್ತರಿಗೆ ಬಂಡೆಪಾಳ್ಯ ಮೂಲಕ ಮಠಕ್ಕೆ ಬರಲು ಅವಕಾಶ ಕಲ್ಪಿಸಿದೆ. ದನಗಳ ಜಾತ್ರೆ ನಡೆಯುವ ಜಾಗದಲ್ಲಿ ವಾಹನ ನಿಲುಗಡೆ ಮಾಡಬಹುದು. ರೈಲು ನಿಲ್ದಾಣ ಮತ್ತು ಕ್ಯಾತ್ಸಂದ್ರ ಬಸ್ ನಿಲ್ದಾಣದಿಂದ ಬರುವವರು ಕೆಳ ಸೇತುವೆ ಮುಖಾಂತರ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಬಹುದು ಎಂದರು.</p>.<p>ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ಟಿ.ಕೆ.ನಂಜುಂಡಪ್ಪ, ಜಯವಿಭವ ಸ್ವಾಮಿ, ಶಿವಕುಮಾರಯ್ಯ, ಪ್ರೊ.ದಿನೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜಯಂತಿ ಕಾರ್ಯಕ್ರಮ ಏ.1ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಭಾನುವಾರ ಇಲ್ಲಿ ಹೇಳಿದರು.</p>.<p>ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, ಮಕ್ಕಳಿಗೆ ತೊಂದರೆಯಾಗದಂತೆ ಸಂಜೆ ಯಾವುದೇ ಕಾರ್ಯಕ್ರಮ ಆಯೋಜಿಸಿಲ್ಲ. ವೇದಿಕೆ ಕಾರ್ಯಕ್ರಮದ ಬಳಿಕ ವೀಣಾವಾದನ ಹಾಗೂ 119 ಮಹಿಳೆಯರಿಂದ ವಚನ ಗಾಯನ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಕಾರ್ಯಕ್ರಮ ನಡೆಯಲಿದೆ. ಎಪಿಎಂಸಿ ಕಡೆಯಿಂದ ಬರುವ ಭಕ್ತರಿಗೆ ಬಂಡೆಪಾಳ್ಯ ಮೂಲಕ ಮಠಕ್ಕೆ ಬರಲು ಅವಕಾಶ ಕಲ್ಪಿಸಿದೆ. ದನಗಳ ಜಾತ್ರೆ ನಡೆಯುವ ಜಾಗದಲ್ಲಿ ವಾಹನ ನಿಲುಗಡೆ ಮಾಡಬಹುದು. ರೈಲು ನಿಲ್ದಾಣ ಮತ್ತು ಕ್ಯಾತ್ಸಂದ್ರ ಬಸ್ ನಿಲ್ದಾಣದಿಂದ ಬರುವವರು ಕೆಳ ಸೇತುವೆ ಮುಖಾಂತರ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಬಹುದು ಎಂದರು.</p>.<p>ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ಟಿ.ಕೆ.ನಂಜುಂಡಪ್ಪ, ಜಯವಿಭವ ಸ್ವಾಮಿ, ಶಿವಕುಮಾರಯ್ಯ, ಪ್ರೊ.ದಿನೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>