<p><strong>ತುಮಕೂರು:</strong> ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಹಾಗೂ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಆಯುಷ್ ಇಲಾಖೆ ಹಾಗೂ ಆಯುಷ್ ವೈದ್ಯರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಸ್.ಶಿವಣ್ಣ ಪ್ರಶಂಸಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊರೊನಾಗೆ ಸಂಬಂಧಿಸಿದಂತೆ ಆಯುಷ್ ಇಲಾಖೆ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತಜ್ಞ ಆಯುಷ್ ವೈದ್ಯರು ಸುಮಾರು ಔಷಧಿಗಳನ್ನು ಸಿದ್ಧಪಡಿಸಿದ್ದಾರೆ. ಔಷಧಿಗಳನ್ನು ರೋಗಿಗಳ ಮೇಲೆ ಪ್ರಯೋಗಿಸಿದ್ದು ಉತ್ತಮ ಫಲಿತಾಂಶ ಬಂದಿದೆ ಎಂದು ಹೇಳಿದರು.</p>.<p>‘ಶುಚಿ, ಬಿಸಿನೀರು ಸೇವನೆ, ಅಂತರ ಕಾಯ್ದುಕೊಳ್ಳುವುದರಿಂದ ರೋಗ ತಡೆಗಟ್ಟಬಹುದು. ಆಯುಷ್ಮಾನ್ ಭಾರತ ಯೋಜನೆಯ ಪೂರ್ಣ ಸದುಪಯೋಗ ಕೆಲವು ಪಟ್ಟಭದ್ರ ಶಕ್ತಿಗಳಿಂದ ಜನರಿಗೆ ದೊರೆಯದಿರುವುದು ನನ್ನ ಗಮನಕ್ಕೆ ಬಂದಿದೆ’ ಎಂದು ದೂರಿದರು.</p>.<p>ತುಮಕೂರು ಜಿಲ್ಲೆಯಲ್ಲಿ ಹೆಚ್ಚಿನ ರೋಗಿಗಳು ಗ್ರಾಮಾಂತರ ಪ್ರದೇಶದವರಾಗಿದ್ದಾರೆ. ರೈತರಾಗಿದ್ದಾರೆ. ಆದ್ದರಿಂದ ಜನೌಷಧಿಗಳನ್ನು ಉಪಯೋಗಿಸುವಂತೆ ಸರ್ಕಾರಿ ಮತ್ತು ಖಾಸಗಿ ವೈದ್ಯರು ರೋಗಿಗಳಿಗೆ ಸಲಹೆ, ಸೂಚನೆನೀಡಬೇಕು ಎಂದು ಕೋರುವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಹಾಗೂ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಆಯುಷ್ ಇಲಾಖೆ ಹಾಗೂ ಆಯುಷ್ ವೈದ್ಯರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಸ್.ಶಿವಣ್ಣ ಪ್ರಶಂಸಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊರೊನಾಗೆ ಸಂಬಂಧಿಸಿದಂತೆ ಆಯುಷ್ ಇಲಾಖೆ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತಜ್ಞ ಆಯುಷ್ ವೈದ್ಯರು ಸುಮಾರು ಔಷಧಿಗಳನ್ನು ಸಿದ್ಧಪಡಿಸಿದ್ದಾರೆ. ಔಷಧಿಗಳನ್ನು ರೋಗಿಗಳ ಮೇಲೆ ಪ್ರಯೋಗಿಸಿದ್ದು ಉತ್ತಮ ಫಲಿತಾಂಶ ಬಂದಿದೆ ಎಂದು ಹೇಳಿದರು.</p>.<p>‘ಶುಚಿ, ಬಿಸಿನೀರು ಸೇವನೆ, ಅಂತರ ಕಾಯ್ದುಕೊಳ್ಳುವುದರಿಂದ ರೋಗ ತಡೆಗಟ್ಟಬಹುದು. ಆಯುಷ್ಮಾನ್ ಭಾರತ ಯೋಜನೆಯ ಪೂರ್ಣ ಸದುಪಯೋಗ ಕೆಲವು ಪಟ್ಟಭದ್ರ ಶಕ್ತಿಗಳಿಂದ ಜನರಿಗೆ ದೊರೆಯದಿರುವುದು ನನ್ನ ಗಮನಕ್ಕೆ ಬಂದಿದೆ’ ಎಂದು ದೂರಿದರು.</p>.<p>ತುಮಕೂರು ಜಿಲ್ಲೆಯಲ್ಲಿ ಹೆಚ್ಚಿನ ರೋಗಿಗಳು ಗ್ರಾಮಾಂತರ ಪ್ರದೇಶದವರಾಗಿದ್ದಾರೆ. ರೈತರಾಗಿದ್ದಾರೆ. ಆದ್ದರಿಂದ ಜನೌಷಧಿಗಳನ್ನು ಉಪಯೋಗಿಸುವಂತೆ ಸರ್ಕಾರಿ ಮತ್ತು ಖಾಸಗಿ ವೈದ್ಯರು ರೋಗಿಗಳಿಗೆ ಸಲಹೆ, ಸೂಚನೆನೀಡಬೇಕು ಎಂದು ಕೋರುವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>