2007-08ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 21,473.67 ಕೋಟಿ ಪರಿಷ್ಕೃತ ಯೋಜನಾ ವರದಿಗೆ ಅನುಮೋದನೆ ದೊರೆತಿದೆ. ಎರಡೂ ಸರ್ಕಾರಗಳು ಇಚ್ಛಾಶಕ್ತಿ ತೋರಿಸಿ ಯೋಜನೆ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು. ಈ ಯೋಜನೆಯ ಮೂಲಕ ನಾಲ್ಕು ಜಿಲ್ಲೆಗಳ 2,25,515 ಹೆಕ್ಟೇರ್ ಭೂ ಪ್ರದೇಶಕ್ಕೆ ನೀರಾವರಿ ಸೌಲಭ್ಯ, 367 ಕೆರೆಗಳಿಗೆ ಶೇ 50ರಷ್ಟು ನೀರು ತುಂಬಿಸಬಹುದು. ವಾಣಿ ವಿಲಾಸ ಜಲಾಶಯಕ್ಕೆ 2 ಟಿಎಂಸಿ ನೀರು ಹರಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.