<p><strong>ತಿಪಟೂರು:</strong> ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಯೋಜನಾ ಮತ್ತು ಅಭಿವೃದ್ಧಿ ಸಮಿತಿ ಸಭೆ ಶನಿವಾರ ನಡೆಯಿತು.</p>.<p>ಶಾಸಕ ಕೆ. ಷಡಕ್ಷರಿ ಮಾತನಾಡಿ, ನೊಣವಿನಕೆರೆಯಿಂದ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಯ ತಾಂತ್ರಿಕ ಸಮಸ್ಯೆ, ಕಾನೂನು ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರ ಯೋಜನೆಗೆ ಚಾಲನೆ ನೀಡಿ ತಿಪಟೂರಿನಿಂದ ಪೈಪ್ಲೈನ್ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.</p>.<p>ನಗರದ ಅಮಾನಿಕೆರೆ ಸೌದರ್ಯರೀಕರಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಅಮಾನಿಕೆರೆ ಆವರಣದಲ್ಲಿ 200 ಹಾಗೂ 300 ಅಳತೆಯ ಗ್ಲಾಸ್ಹೌಸ್ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಎಲ್ಲ ಮಹನೀಯರ ಪುತ್ಥಳಿಗಳ ನಿರ್ಮಾಣಕ್ಕೆ ಈಗಾಗಲೇ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ₹400 ಕೋಟಿ ಯೋಜನೆ ರೂಪಿಸಲಾಗಿದೆ. ₹5 ಕೋಟಿ ವೆಚ್ಚದಲ್ಲಿ ನಗರದ ಹೃದಯಭಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ, ₹9.5ಕೋಟಿ ವೆಚ್ಚದಲ್ಲಿ ಬೃಹತ್ ಬಂಧಿಖಾನೆ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ತಾಲ್ಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಜನವಸತಿ ಪ್ರದೇಶದಲ್ಲಿ ಪೊದೆ ತೆರವುಗೊಳಿಸಿ, ಜನಜಾನುವಾರುಗಳಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ಹಾಲ್ಕುರಿಕೆ ಸಾರ್ಥವಳ್ಳಿ ಪಶು ಆಸ್ಪತ್ರೆಗಳು ಶಿಥಿಲವಾಗಿದ್ದು ಮರು ನಿರ್ಮಾಣ, ಚನ್ನನಕೆರೆ ಬಳಿ ಸಬ್ ಎಸ್ಟಿಪಿ ಘಟಕ ಸ್ಥಾಪನೆಗೆ ಕ್ರಮವಹಿಸಲಾಗುವುದು ಎಂದರು.</p>.<p>ತಹಶೀಲ್ದಾರ್ ಮೋಹನ್ ಕುಮಾರ್, ಇಒ ಸುದರ್ಶನ್, ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ಗ್ರೇಡ್– 2 ತಹಶೀಲ್ದಾರ್ ಜಗನ್ನಾಥ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಯೋಜನಾ ಮತ್ತು ಅಭಿವೃದ್ಧಿ ಸಮಿತಿ ಸಭೆ ಶನಿವಾರ ನಡೆಯಿತು.</p>.<p>ಶಾಸಕ ಕೆ. ಷಡಕ್ಷರಿ ಮಾತನಾಡಿ, ನೊಣವಿನಕೆರೆಯಿಂದ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಯ ತಾಂತ್ರಿಕ ಸಮಸ್ಯೆ, ಕಾನೂನು ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರ ಯೋಜನೆಗೆ ಚಾಲನೆ ನೀಡಿ ತಿಪಟೂರಿನಿಂದ ಪೈಪ್ಲೈನ್ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.</p>.<p>ನಗರದ ಅಮಾನಿಕೆರೆ ಸೌದರ್ಯರೀಕರಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಅಮಾನಿಕೆರೆ ಆವರಣದಲ್ಲಿ 200 ಹಾಗೂ 300 ಅಳತೆಯ ಗ್ಲಾಸ್ಹೌಸ್ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಎಲ್ಲ ಮಹನೀಯರ ಪುತ್ಥಳಿಗಳ ನಿರ್ಮಾಣಕ್ಕೆ ಈಗಾಗಲೇ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ₹400 ಕೋಟಿ ಯೋಜನೆ ರೂಪಿಸಲಾಗಿದೆ. ₹5 ಕೋಟಿ ವೆಚ್ಚದಲ್ಲಿ ನಗರದ ಹೃದಯಭಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ, ₹9.5ಕೋಟಿ ವೆಚ್ಚದಲ್ಲಿ ಬೃಹತ್ ಬಂಧಿಖಾನೆ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ತಾಲ್ಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಜನವಸತಿ ಪ್ರದೇಶದಲ್ಲಿ ಪೊದೆ ತೆರವುಗೊಳಿಸಿ, ಜನಜಾನುವಾರುಗಳಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ಹಾಲ್ಕುರಿಕೆ ಸಾರ್ಥವಳ್ಳಿ ಪಶು ಆಸ್ಪತ್ರೆಗಳು ಶಿಥಿಲವಾಗಿದ್ದು ಮರು ನಿರ್ಮಾಣ, ಚನ್ನನಕೆರೆ ಬಳಿ ಸಬ್ ಎಸ್ಟಿಪಿ ಘಟಕ ಸ್ಥಾಪನೆಗೆ ಕ್ರಮವಹಿಸಲಾಗುವುದು ಎಂದರು.</p>.<p>ತಹಶೀಲ್ದಾರ್ ಮೋಹನ್ ಕುಮಾರ್, ಇಒ ಸುದರ್ಶನ್, ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ಗ್ರೇಡ್– 2 ತಹಶೀಲ್ದಾರ್ ಜಗನ್ನಾಥ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>