<p><strong>ವೈ.ಎನ್.ಹೊಸಕೋಟೆ:</strong> ಹೋಬಳಿಯ ಅನ್ನಲಪುರಿ ಅಂಜನೇಯಸ್ವಾಮಿ ಅಜ್ಜನ ಶ್ರಾವಣ ಜಾತ್ರೆ ಶನಿವಾರ ನೆರವೇರಿತು.</p>.<p>ಪ್ರತಿವರ್ಷ ಶ್ರಾವಣದ ಕೊನೆ ಶನಿವಾರದಂದು ಜಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಬಂದು ದೇವರ ದರ್ಶನ ಪಡೆದರು.</p>.<p>ಹೋಬಳಿ ಕೇಂದ್ರದಿಂದ ಸುಮಾರು 5 ಕಿ.ಮೀ ದೂರದಲ್ಲಿ ಆಂಧ್ರಪ್ರದೇಶದ ರಸ್ತೆಯಲ್ಲಿ ಆಂಜನೇಯ ದೇವಾಲಯವಿದ್ದು, ಶ್ರಾವಣ ಮಾಸದಲ್ಲಿ ವಿಶೇಷ ಪೂಜೆ ನೆರವೇರುತ್ತವೆ. ಕೊನೆಯ ಶನಿವಾರದಂದು ಹರಕೆ ಹೊತ್ತ ಭಕ್ತರ ಪಾಳಿಯಂತೆ ದೇವರಿಗೆ ವಿಳ್ಯದೆಲೆ ಅಲಂಕಾರದೊಂದಿಗೆ ಪೂಜೆ ಸಲ್ಲಿಸಿದರು.</p>.<p>ಬೆಳಿಗ್ಗೆಯಿಂದಲೇ ಅರ್ಧ ಕಿ.ಮೀ ದೂರ ಸರತಿ ಸಾಲಿನಲ್ಲಿ ಭಕ್ತರು ಸಾಗಿ ದೇವರ ದರ್ಶನ ಪಡೆದರು. ಜಾತ್ರೆ ಬಂದ ಜನತೆ ಮಂಡಕ್ಕಿಪುರಿ ಖರೀದಿಸಿ ಸವಿದು ಆನಂದಿಸಿದರು. ಆಗಾಗ್ಗೆ ಸುರಿಯುತ್ತಿದ್ದ ಮಳೆ ಹನಿಯಿಂದ ಜಾತ್ರೆಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು.</p>.<p>ಭಕ್ತರ ನೂಕುನುಗ್ಗಲನ್ನು ತಪ್ಪಿಸಲು ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆಯರು ಸೂಕ್ತ ವ್ಯವಸ್ಥೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವೈ.ಎನ್.ಹೊಸಕೋಟೆ:</strong> ಹೋಬಳಿಯ ಅನ್ನಲಪುರಿ ಅಂಜನೇಯಸ್ವಾಮಿ ಅಜ್ಜನ ಶ್ರಾವಣ ಜಾತ್ರೆ ಶನಿವಾರ ನೆರವೇರಿತು.</p>.<p>ಪ್ರತಿವರ್ಷ ಶ್ರಾವಣದ ಕೊನೆ ಶನಿವಾರದಂದು ಜಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಬಂದು ದೇವರ ದರ್ಶನ ಪಡೆದರು.</p>.<p>ಹೋಬಳಿ ಕೇಂದ್ರದಿಂದ ಸುಮಾರು 5 ಕಿ.ಮೀ ದೂರದಲ್ಲಿ ಆಂಧ್ರಪ್ರದೇಶದ ರಸ್ತೆಯಲ್ಲಿ ಆಂಜನೇಯ ದೇವಾಲಯವಿದ್ದು, ಶ್ರಾವಣ ಮಾಸದಲ್ಲಿ ವಿಶೇಷ ಪೂಜೆ ನೆರವೇರುತ್ತವೆ. ಕೊನೆಯ ಶನಿವಾರದಂದು ಹರಕೆ ಹೊತ್ತ ಭಕ್ತರ ಪಾಳಿಯಂತೆ ದೇವರಿಗೆ ವಿಳ್ಯದೆಲೆ ಅಲಂಕಾರದೊಂದಿಗೆ ಪೂಜೆ ಸಲ್ಲಿಸಿದರು.</p>.<p>ಬೆಳಿಗ್ಗೆಯಿಂದಲೇ ಅರ್ಧ ಕಿ.ಮೀ ದೂರ ಸರತಿ ಸಾಲಿನಲ್ಲಿ ಭಕ್ತರು ಸಾಗಿ ದೇವರ ದರ್ಶನ ಪಡೆದರು. ಜಾತ್ರೆ ಬಂದ ಜನತೆ ಮಂಡಕ್ಕಿಪುರಿ ಖರೀದಿಸಿ ಸವಿದು ಆನಂದಿಸಿದರು. ಆಗಾಗ್ಗೆ ಸುರಿಯುತ್ತಿದ್ದ ಮಳೆ ಹನಿಯಿಂದ ಜಾತ್ರೆಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು.</p>.<p>ಭಕ್ತರ ನೂಕುನುಗ್ಗಲನ್ನು ತಪ್ಪಿಸಲು ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆಯರು ಸೂಕ್ತ ವ್ಯವಸ್ಥೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>