ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಿ

ಶಾಸಕ ಮಸಾಲಜಯರಾಮ್ ಮನವಿ
Last Updated 14 ಅಕ್ಟೋಬರ್ 2019, 21:21 IST
ಅಕ್ಷರ ಗಾತ್ರ

ತುರುವೇಕೆರೆ: ಬಿಜೆಪಿ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಹಾಗೂ ತಳಸಮುದಾಯಗಳ ಬಗ್ಗೆ ಕಾಳಜಿ ಇರುವ ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಶಾಸಕ ಮಸಾಲ ಜಯರಾಮ್ ಸರ್ಕಾರಕ್ಕೆ ಮನವಿ ಮಾಡಿದರು.

ಪಟ್ಟಣದ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಾಲ್ಮೀಕಿ ಸಮುದಾಯದ ಮುಖಂಡರ ಮನವಿ ಮೇರೆಗೆ ಪಟ್ಟಣದಲ್ಲಿ ನಿರ್ಮಾಣವಾಗುವ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕರ ಅನುದಾನದಿಂದ ₹ 10 ಲಕ್ಷ ನೀಡುವುದಾಗಿ ಭರವಸೆ ನೀಡಿದರು.

ವಾಲ್ಮೀಕಿ ಸಮುದಾಯದ ಪರಂಪರೆ ಅತ್ಯಂತ ಪ್ರಾಚೀನವಾಗಿದ್ದು, ರಾಜ್ಯದಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿ ಜಗತ್ತಿನಾದ್ಯಂತ ನಾಡಿನ ಕೀರ್ತಿ ಪಸರಿಸುವಂತೆ ಮಾಡಿದವರು ವಾಲ್ಮೀಕಿ ವಂಶಸ್ಥರೆ ಎಂಬುದನ್ನು ಚರಿತ್ರೆ ಹೇಳುತ್ತದೆ ಎಂದರು.

ಎಪಿಎಂಸಿ ನಿರ್ದೇಶಕ ವಿ.ಟಿ.ವೆಂಕಟರಾಮ್ ಮಾತನಾಡಿ, ವಾಲ್ಮೀಕಿ ಬರೆದ ‘ರಾಮಾಯಣ’ ಇಡೀ ಮನುಕುಲಕ್ಕೆ ಮಾದರಿಯಾಗಿದೆ. ರಾಮಾಯಣದಲ್ಲಿ ಕುಟುಂಬದ ಭಾವನಾತ್ಮಕ ಸಂಬಂಧಗಳು ಮತ್ತು ಅದರ ಮೌಲ್ಯಗಳು ಅನಾವರಣಗೊಂಡಿವೆ ಎಂದರು.

ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಹಾಗೂ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅವರನ್ನು ಅಭಿನಂದಿಸಲಾಯಿತು. ವಿವಿಧ ಜನಪದ ಕಲಾತಂಡಗಳಿಂದ ವಾಲ್ಮೀಕ ಭಾವಚಿತ್ರವನ್ನು ಉಡಿಸಲಮ್ಮ ದೇವಸ್ಥಾನದಿಂದ ವೇದಿಕೆವರೆಗೆ ಮೆರವಣಿಗೆ ಮಾಡಲಾಯಿತು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷ ಮಹಲಿಂಗಯ್ಯ, ಸದಸ್ಯರಾದ ಭೈರಪ್ಪ, ಸುಶೀಲಮ್ಮ, ಪಟ್ಟಣ ಪಂಚಾಯಿತಿ ಸದಸ್ಯ ಚಿದಾನಂದ್, ಎಪಿಎಂಸಿ ಅಧ್ಯಕ್ಷ ಪ್ರಸನ್ನಕುಮಾರ್, ಸಮಾಜ ಕಲ್ಯಾಣಾಧಿಕಾರಿ ರಾಮಯ್ಯ, ಬಿಇಒ ರಂಗಧಾಮಯ್ಯ, ಕಸಾಪ ನಂರಾಜು ಮುನಿಯೂರು, ಮುಖಂಡ ದುಂಡಾರೇಣುಕಪ್ಪ, ಪ್ರಹ್ಲಾದ್, ಸಮುದಾಯದ ಮುಖಂಡರು ಮತ್ತು ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT