ತುಮಕೂರು: ಇಲ್ಲಿನ ಸಿದ್ಧಗಂಗಾ ಮಠದಲ್ಲಿ ಏ. 5ರಂದು ನಡೆಯಬೇಕಿದ್ದ ಶಿವಕುಮಾರ ಸ್ವಾಮೀಜಿ 113ನೇ ಜನ್ಮದಿನದ ಕಾರ್ಯಕ್ರಮವನ್ನು ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಮಠಕ್ಕೆ ಭೇಟಿ ನೀಡುತ್ತಿರುವ ಭಕ್ತರು ಹಾಗೂ ಸಾರ್ವಜನಿಕರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ವಾರ್ಷಿಕ ಪರೀಕ್ಷೆಗಳು ಪೂರ್ಣವಾದ ವಿದ್ಯಾರ್ಥಿಗಳನ್ನು ಅವರ ಸ್ವಗ್ರಾಮಕ್ಕೆ ಕಳುಹಿಸಲು ಮಠದ ಆಡಳಿತ ಮಂಡಳಿ ಮುಂದಾಗಿದೆ.
7ನೇ ಮತ್ತು 10ನೇ ತರಗತಿ ಮಕ್ಕಳನ್ನು ಹೊರತುಪಡಿಸಿ ಪರೀಕ್ಷೆ ಪೂರ್ಣಗೊಂಡಿರುವ ಮಕ್ಕಳನ್ನು ಅವರ ಊರುಗಳಿಗೆ ಕಳುಹಿಸಲಾಗುವುದು’ ಎಂದು ಮಠದ ಆಡಳಿತಾಧಿಕಾರಿ ಎಸ್.ವಿಶ್ವನಾಥಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು.
ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಆಗಾಗ್ಗೆ ಮಠಕ್ಕೆ ಭೇಟಿ ನೀಡುತ್ತಿದ್ದು ನಿಗಾ ಇಟ್ಟಿದ್ದಾರೆ.