ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧಗಂಗಾ ಮಠದ ದ್ವಾರದಲ್ಲಿ ಸ್ಯಾನಿಟರಿ ಸುರಂಗ ಮಾರ್ಗ

Last Updated 15 ಜೂನ್ 2020, 16:53 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಮಠದಲ್ಲಿ ಕಲ್ಪಶುದ್ಧಿ ಸ್ಯಾನಿಟರಿ ಸುರಂಗ ಮಾರ್ಗ ಸ್ಥಾಪಿಸಲಾಗಿದೆ. ಸೋಮವಾರ ಸಿದ್ಧಲಿಂಗ ಸ್ವಾಮೀಜಿ ಘಟಕ ಉದ್ಘಾಟಿಸಿದರು.

ಕ್ಯಾತ್ಸಂದ್ರದಿಂದ ಮಠಕ್ಕೆ ಪ್ರವೇಶ ಪಡೆಯುವ ವಸ್ತುಪ್ರದರ್ಶನದ ಮುಂಭಾಗದ ಗೇಟ್ ಬಳಿ ಈ ಘಟಕ ಸ್ಥಾಪಿಸಲಾಗಿದೆ. ಸಂಜೀವಿನಿ ರಕ್ತನಿಧಿ ಕೇಂದ್ರದ ಅರುಣ್‍ಕುಮಾರ್ ಇದನ್ನು ಕೊಡುಗೆಯಾಗಿ ನೀಡಿದ್ದಾರೆ. ಎಸ್‍ಐಟಿ ಕಾಲೇಜು ಜೈವಿಕ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿ ಚಿದಾನಂದ್ ಈ ಘಟಕ ರೂಪಿಸಿದ್ದಾರೆ.

ಸಿದ್ಧಲಿಂಗ ಸ್ವಾಮೀಜಿ, ‘ಇಲ್ಲಿ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತದೆ. ಹೀಗಾಗಿ ಮಠಕ್ಕೆ ಬರುವ ಭಕ್ತರಿಗೆ ಪ್ರತ್ಯೇಕವಾಗಿ ಸ್ಯಾನಿಟೈಸರ್ ಹಾಕುವ ಅವಶ್ಯಕತೆ ಇಲ್ಲ. ಗೇಟ್‍ನಲ್ಲೆ ಥರ್ಮಲ್ ಸ್ಕ್ಯಾನಿಂಗ್ ಸಹ ಮಾಡಲಾಗುವುದು’ ಎಂದು ಹೇಳಿದರು.

ಎಸ್‍ಐಟಿ ಕಾಲೇಜು ಸಿಇಒ ಡಾ.ಶಿವಕುಮಾರಯ್ಯ, ಎಸ್‍ಐಟಿ ನಿರ್ದೇಶಕ ಎಂ.ಎನ್.ಚನ್ನಬಸಪ್ಪ, ಪ್ರಾಂಶುಪಾಲ ಶಿವಾನಂದ್, ಪುನೀತ್, ಅರುಣ್‍ಕುಮಾರ್, ಚಿದಾನಂದ್, ಸುರೇಶ್, ಗೌರಿಶಂಕರ್, ಲೋಹಿತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT