<p><strong>ತುಮಕೂರು:</strong> ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಮಠದಲ್ಲಿ ಕಲ್ಪಶುದ್ಧಿ ಸ್ಯಾನಿಟರಿ ಸುರಂಗ ಮಾರ್ಗ ಸ್ಥಾಪಿಸಲಾಗಿದೆ. ಸೋಮವಾರ ಸಿದ್ಧಲಿಂಗ ಸ್ವಾಮೀಜಿ ಘಟಕ ಉದ್ಘಾಟಿಸಿದರು.</p>.<p>ಕ್ಯಾತ್ಸಂದ್ರದಿಂದ ಮಠಕ್ಕೆ ಪ್ರವೇಶ ಪಡೆಯುವ ವಸ್ತುಪ್ರದರ್ಶನದ ಮುಂಭಾಗದ ಗೇಟ್ ಬಳಿ ಈ ಘಟಕ ಸ್ಥಾಪಿಸಲಾಗಿದೆ. ಸಂಜೀವಿನಿ ರಕ್ತನಿಧಿ ಕೇಂದ್ರದ ಅರುಣ್ಕುಮಾರ್ ಇದನ್ನು ಕೊಡುಗೆಯಾಗಿ ನೀಡಿದ್ದಾರೆ. ಎಸ್ಐಟಿ ಕಾಲೇಜು ಜೈವಿಕ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿ ಚಿದಾನಂದ್ ಈ ಘಟಕ ರೂಪಿಸಿದ್ದಾರೆ.</p>.<p>ಸಿದ್ಧಲಿಂಗ ಸ್ವಾಮೀಜಿ, ‘ಇಲ್ಲಿ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತದೆ. ಹೀಗಾಗಿ ಮಠಕ್ಕೆ ಬರುವ ಭಕ್ತರಿಗೆ ಪ್ರತ್ಯೇಕವಾಗಿ ಸ್ಯಾನಿಟೈಸರ್ ಹಾಕುವ ಅವಶ್ಯಕತೆ ಇಲ್ಲ. ಗೇಟ್ನಲ್ಲೆ ಥರ್ಮಲ್ ಸ್ಕ್ಯಾನಿಂಗ್ ಸಹ ಮಾಡಲಾಗುವುದು’ ಎಂದು ಹೇಳಿದರು.</p>.<p>ಎಸ್ಐಟಿ ಕಾಲೇಜು ಸಿಇಒ ಡಾ.ಶಿವಕುಮಾರಯ್ಯ, ಎಸ್ಐಟಿ ನಿರ್ದೇಶಕ ಎಂ.ಎನ್.ಚನ್ನಬಸಪ್ಪ, ಪ್ರಾಂಶುಪಾಲ ಶಿವಾನಂದ್, ಪುನೀತ್, ಅರುಣ್ಕುಮಾರ್, ಚಿದಾನಂದ್, ಸುರೇಶ್, ಗೌರಿಶಂಕರ್, ಲೋಹಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಮಠದಲ್ಲಿ ಕಲ್ಪಶುದ್ಧಿ ಸ್ಯಾನಿಟರಿ ಸುರಂಗ ಮಾರ್ಗ ಸ್ಥಾಪಿಸಲಾಗಿದೆ. ಸೋಮವಾರ ಸಿದ್ಧಲಿಂಗ ಸ್ವಾಮೀಜಿ ಘಟಕ ಉದ್ಘಾಟಿಸಿದರು.</p>.<p>ಕ್ಯಾತ್ಸಂದ್ರದಿಂದ ಮಠಕ್ಕೆ ಪ್ರವೇಶ ಪಡೆಯುವ ವಸ್ತುಪ್ರದರ್ಶನದ ಮುಂಭಾಗದ ಗೇಟ್ ಬಳಿ ಈ ಘಟಕ ಸ್ಥಾಪಿಸಲಾಗಿದೆ. ಸಂಜೀವಿನಿ ರಕ್ತನಿಧಿ ಕೇಂದ್ರದ ಅರುಣ್ಕುಮಾರ್ ಇದನ್ನು ಕೊಡುಗೆಯಾಗಿ ನೀಡಿದ್ದಾರೆ. ಎಸ್ಐಟಿ ಕಾಲೇಜು ಜೈವಿಕ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿ ಚಿದಾನಂದ್ ಈ ಘಟಕ ರೂಪಿಸಿದ್ದಾರೆ.</p>.<p>ಸಿದ್ಧಲಿಂಗ ಸ್ವಾಮೀಜಿ, ‘ಇಲ್ಲಿ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತದೆ. ಹೀಗಾಗಿ ಮಠಕ್ಕೆ ಬರುವ ಭಕ್ತರಿಗೆ ಪ್ರತ್ಯೇಕವಾಗಿ ಸ್ಯಾನಿಟೈಸರ್ ಹಾಕುವ ಅವಶ್ಯಕತೆ ಇಲ್ಲ. ಗೇಟ್ನಲ್ಲೆ ಥರ್ಮಲ್ ಸ್ಕ್ಯಾನಿಂಗ್ ಸಹ ಮಾಡಲಾಗುವುದು’ ಎಂದು ಹೇಳಿದರು.</p>.<p>ಎಸ್ಐಟಿ ಕಾಲೇಜು ಸಿಇಒ ಡಾ.ಶಿವಕುಮಾರಯ್ಯ, ಎಸ್ಐಟಿ ನಿರ್ದೇಶಕ ಎಂ.ಎನ್.ಚನ್ನಬಸಪ್ಪ, ಪ್ರಾಂಶುಪಾಲ ಶಿವಾನಂದ್, ಪುನೀತ್, ಅರುಣ್ಕುಮಾರ್, ಚಿದಾನಂದ್, ಸುರೇಶ್, ಗೌರಿಶಂಕರ್, ಲೋಹಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>