3ರ ವರೆಗೆ ಮಾತ್ರ ದರ್ಶನ: ಕಿರಿಯ ಶ್ರೀ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ಶಿವಕುಮಾರ ಸ್ವಾಮೀಜಿ ದರ್ಶನಕ್ಕೆ ಅವಕಾಶ. ನಂತರ ಸಮಯ ವಿಸ್ತರಣೆ ಇಲ್ಲ. 3.30ರ ಬಳಿಕ ಕ್ರಿಯಾಸಮಾಧಿ ಪ್ರಕ್ರಿಯೆ ನಡೆಯಲಿದೆ ಎಂದು ಕಿರಿಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಪ್ರಸಾದ ವ್ಯವಸ್ಥೆ ಬರುವ ಭಕ್ತರಿಗೆ 10ಕ್ಕೂ ಹೆಚ್ಚು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಹಲವು ಹಳ್ಳಿಗಳ ಜನರು ಸ್ವಯಂ ಪ್ರೇರಿತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ತುಮಕೂರು ನಗರದಲ್ಲಿ ಅಘೋಷಿತ ಬಂದ್ ಏರರ್ಪಟ್ಟಿದ್ದು, ಬಹುತೇಕ ಅಂಗಡಿ ಮುಂಗಟ್ಟೆಗಳು ಮುಚ್ಚಿವೆ. ಹಲವು ಹೋಟೇಲ್ಗಳ ಮಾಲೀಕರು ಭಕ್ತರಿಗೆ ಉಚಿ ಉಪಹಾರ, ಊಟ ನೀಡುತ್ತಿದ್ದಾರೆ.