ಆಂಧ್ರಪ್ರದೇಶದ ಕರ್ನೂಲ್ ಮೂಲದ ಈ ವಿದ್ಯಾರ್ಥಿ ರಾಯಚೂರು ಮೂಲಕ ಜೂ.15ಕ್ಕೆ ಮಠಕ್ಕೆ ಬಂದಿದ್ದ. ಆತನಲ್ಲಿ ಯಾವುದೇ ರೋಗಲಕ್ಷಣಗಳು ಕಂಡು ಬಂದಿರಲಿಲ್ಲ. ಕರ್ನೂಲ್ ಜಿಲ್ಲಾಡಳಿತ ವಿದ್ಯಾರ್ಥಿಗೆ ಸೋಂಕು ತಗುಲಿರುವ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಮಠಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ದರು. ಗಂಟಲು ಸ್ರಾವ ಮತ್ತು ಕಫದ ಮಾದರಿಯ ಪರೀಕ್ಷೆ ನಡೆಯುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.