ಶಿವಕುಮಾರ ಸ್ವಾಮೀಜಿ ಎಂದೂ ಜನ್ಮದಿನ ಆಚರಿಸಿಕೊಂಡವರಲ್ಲ. ಭಕ್ತರ ಒತ್ತಾಯದ ಮೇರೆಗೆ ಹುಟ್ಟುಹಬ್ಬ ಆಚರಣೆಯನ್ನು ಗುರುವಂದನಾ ಮಹೋತ್ಸವವಾಗಿ ಆಚರಿಸಲಾಗುತ್ತಿತ್ತು ಎಂದರು.
ಶ್ರೀಗಳು ವೈಯಕ್ತಿವಾಗಿ ಏನನ್ನೂ ಬಯಸದೆ ಸಮಾಜಕ್ಕಾಗಿ ದುಡಿದರು. ಸಮಾಜಕ್ಕೆ ಬದುಕನ್ನು ಮುಡುಪಾಗಿಟ್ಟರು. ಶೈಕ್ಷಣಿಕವಾಗಿ ಕ್ರಾಂತಿ ಮಾಡಿದ ಸ್ವಾಮೀಜಿ, ಲಕ್ಷಾಂತರ ಮಕ್ಕಳ ಬದುಕು ಹಸನು ಮಾಡಿದ್ದಾರೆ ಎಂದು ಸ್ಮರಿಸಿದರು.