<p><strong>ತುಮಕೂರು:</strong> ಶಿವಕುಮಾರ ಸ್ವಾಮೀಜಿ 113ನೇ ಜನ್ಮದಿನದ ಕಾರ್ಯಕ್ರಮ ಸಿದ್ಧಗಂಗಾ ಮಠದಲ್ಲಿ ಬುಧವಾರ ಸರಳವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿತು.</p>.<p>ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಮಠಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಅದ್ಧೂರಿ ಆಚರಣೆಯನ್ನು ಮಠದ ಆಡಳಿತ ಮಂಡಳಿ ರದ್ದು ಮಾಡಿತ್ತು. ನಿತ್ಯದಂತೆ ಸ್ವಾಮೀಜಿ ಗದ್ದುಗೆಗೆ ರುದ್ರಾಭಿಷೇಕ ಹಾಗೂ ಪೂಜೆ ನೆರವೇರಿಸಲಾಯಿತು. ಮುಂಜಾನೆ ಸಿದ್ದಲಿಂಗ ಸ್ವಾಮೀಜಿ ಇಷ್ಟಲಿಂಗ ಪೂಜೆ ನೆರವೇರಿಸಿ ಗದ್ದುಗೆಗೆ ಪೂಜೆ ಸಲ್ಲಿಸಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/stories/national/modi-tributes-to-dr-sree-sree-sree-sivakumara-swamigalu-on-his-jayanti-716736.html" target="_blank">ಶಿವಕುಮಾರ ಸ್ವಾಮೀಜಿ ಜಯಂತಿ: ಕನ್ನಡದಲ್ಲೇ ಟ್ವೀಟ್ ಮಾಡಿ ಗೌರವಿಸಿದ ಮೋದಿ</a></p>.<p>ನಂತರ ಸಾಮಾಜಿಕ ಅಂತರ ಕಾಯ್ದುಕೊಂಡು ಧ್ಯಾನ ಮಂದಿರದಲ್ಲಿ ಧ್ಯಾನ ಮಾಡಲಾಯಿತು. ಪ್ರತಿ ವರ್ಷ ಏ.1ರಂದು ಮಠಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದರು. ಸಿಹಿ ಖಾದ್ಯಗಳನ್ನು ಪ್ರಸಾದ ರೂಪದಲ್ಲಿ ಉಣಬಡಿಸಲಾಗುತ್ತಿತ್ತು. ಈ ಸಲ ಯಾರೊಬ್ಬರೂ ಗದ್ದುಗೆ ದರ್ಶನಕ್ಕೆ ಬಂದಿರಲಿಲ್ಲ. ಮಧ್ಯಾಹ್ನ ಮಠದಲ್ಲಿರುವ 2 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು.</p>.<p>ಧ್ಯಾನ ಮಂದಿರದಲ್ಲಿ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ‘ಎಂದೂ ಕಂಡರಿಯದ ಸ್ಥಿತಿಯಲ್ಲಿ ನಾವಿದ್ದೇವೆ. ಯಾರೊಬ್ಬರನ್ನೂ ಮುಟ್ಟದಂತಹ ಸನ್ನಿವೇಶ ಇದೆ. ದೇಶಕ್ಕೆ ಎದುರಾಗಿರುವ ಈ ಗಂಡಾಂತರ ದೂರವಾಗಲಿ ಎಂದು ಪ್ರಾರ್ಥಿಸಲಾಗಿದೆ’ ಎಂದು ಹೇಳಿದರು.</p>.<p>ಜನರಲ್ಲಿ ಭಯ, ಆತಂಕ ಮನೆ ಮಾಡಿದೆ. ವಿದೇಶಗಳಿಂದ ಬಂದವರು ನಮ್ಮ ದೇಶಕ್ಕೆ ಕೊರೊನಾ ಸೋಂಕು ತಂದಿದ್ದಾರೆ. ಇದರ ನಿಗ್ರಹಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿವೆ. ಜನಸಾಮಾನ್ಯರು ಸಹ ಮನೆಯಲ್ಲಿದ್ದು ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>‘ಪೂಜ್ಯರ ಭೌತಿಕ ದರ್ಶನ ನಮಗೆ ಇಲ್ಲ. ಆದರೆ ಭಾವನಾತ್ಮಕವಾದ ಭಕ್ತಿಯೊಂದಿಗೆ ಸ್ಮರಣೆ ಮಾಡುವ ಮೂಲಕ ನಮ್ಮ ಬದುಕನ್ನು ಹಸನು ಮಾಡಿಕೊಳ್ಳೋಣ’ ಎಂದು ಆಶಿಸಿದರು.</p>.<p>ಶಿವಕುಮಾರ ಸ್ವಾಮೀಜಿ ಎಂದೂ ಜನ್ಮದಿನ ಆಚರಿಸಿಕೊಂಡವರಲ್ಲ. ಭಕ್ತರ ಒತ್ತಾಯದ ಮೇರೆಗೆ ಹುಟ್ಟುಹಬ್ಬ ಆಚರಣೆಯನ್ನು ಗುರುವಂದನಾ ಮಹೋತ್ಸವವಾಗಿ ಆಚರಿಸಲಾಗುತ್ತಿತ್ತು ಎಂದರು.<br /><br />ಶ್ರೀಗಳು ವೈಯಕ್ತಿವಾಗಿ ಏನನ್ನೂ ಬಯಸದೆ ಸಮಾಜಕ್ಕಾಗಿ ದುಡಿದರು. ಸಮಾಜಕ್ಕೆ ಬದುಕನ್ನು ಮುಡುಪಾಗಿಟ್ಟರು. ಶೈಕ್ಷಣಿಕವಾಗಿ ಕ್ರಾಂತಿ ಮಾಡಿದ ಸ್ವಾಮೀಜಿ, ಲಕ್ಷಾಂತರ ಮಕ್ಕಳ ಬದುಕು ಹಸನು ಮಾಡಿದ್ದಾರೆ ಎಂದು ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಶಿವಕುಮಾರ ಸ್ವಾಮೀಜಿ 113ನೇ ಜನ್ಮದಿನದ ಕಾರ್ಯಕ್ರಮ ಸಿದ್ಧಗಂಗಾ ಮಠದಲ್ಲಿ ಬುಧವಾರ ಸರಳವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿತು.</p>.<p>ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಮಠಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಅದ್ಧೂರಿ ಆಚರಣೆಯನ್ನು ಮಠದ ಆಡಳಿತ ಮಂಡಳಿ ರದ್ದು ಮಾಡಿತ್ತು. ನಿತ್ಯದಂತೆ ಸ್ವಾಮೀಜಿ ಗದ್ದುಗೆಗೆ ರುದ್ರಾಭಿಷೇಕ ಹಾಗೂ ಪೂಜೆ ನೆರವೇರಿಸಲಾಯಿತು. ಮುಂಜಾನೆ ಸಿದ್ದಲಿಂಗ ಸ್ವಾಮೀಜಿ ಇಷ್ಟಲಿಂಗ ಪೂಜೆ ನೆರವೇರಿಸಿ ಗದ್ದುಗೆಗೆ ಪೂಜೆ ಸಲ್ಲಿಸಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/stories/national/modi-tributes-to-dr-sree-sree-sree-sivakumara-swamigalu-on-his-jayanti-716736.html" target="_blank">ಶಿವಕುಮಾರ ಸ್ವಾಮೀಜಿ ಜಯಂತಿ: ಕನ್ನಡದಲ್ಲೇ ಟ್ವೀಟ್ ಮಾಡಿ ಗೌರವಿಸಿದ ಮೋದಿ</a></p>.<p>ನಂತರ ಸಾಮಾಜಿಕ ಅಂತರ ಕಾಯ್ದುಕೊಂಡು ಧ್ಯಾನ ಮಂದಿರದಲ್ಲಿ ಧ್ಯಾನ ಮಾಡಲಾಯಿತು. ಪ್ರತಿ ವರ್ಷ ಏ.1ರಂದು ಮಠಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದರು. ಸಿಹಿ ಖಾದ್ಯಗಳನ್ನು ಪ್ರಸಾದ ರೂಪದಲ್ಲಿ ಉಣಬಡಿಸಲಾಗುತ್ತಿತ್ತು. ಈ ಸಲ ಯಾರೊಬ್ಬರೂ ಗದ್ದುಗೆ ದರ್ಶನಕ್ಕೆ ಬಂದಿರಲಿಲ್ಲ. ಮಧ್ಯಾಹ್ನ ಮಠದಲ್ಲಿರುವ 2 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು.</p>.<p>ಧ್ಯಾನ ಮಂದಿರದಲ್ಲಿ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ‘ಎಂದೂ ಕಂಡರಿಯದ ಸ್ಥಿತಿಯಲ್ಲಿ ನಾವಿದ್ದೇವೆ. ಯಾರೊಬ್ಬರನ್ನೂ ಮುಟ್ಟದಂತಹ ಸನ್ನಿವೇಶ ಇದೆ. ದೇಶಕ್ಕೆ ಎದುರಾಗಿರುವ ಈ ಗಂಡಾಂತರ ದೂರವಾಗಲಿ ಎಂದು ಪ್ರಾರ್ಥಿಸಲಾಗಿದೆ’ ಎಂದು ಹೇಳಿದರು.</p>.<p>ಜನರಲ್ಲಿ ಭಯ, ಆತಂಕ ಮನೆ ಮಾಡಿದೆ. ವಿದೇಶಗಳಿಂದ ಬಂದವರು ನಮ್ಮ ದೇಶಕ್ಕೆ ಕೊರೊನಾ ಸೋಂಕು ತಂದಿದ್ದಾರೆ. ಇದರ ನಿಗ್ರಹಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿವೆ. ಜನಸಾಮಾನ್ಯರು ಸಹ ಮನೆಯಲ್ಲಿದ್ದು ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>‘ಪೂಜ್ಯರ ಭೌತಿಕ ದರ್ಶನ ನಮಗೆ ಇಲ್ಲ. ಆದರೆ ಭಾವನಾತ್ಮಕವಾದ ಭಕ್ತಿಯೊಂದಿಗೆ ಸ್ಮರಣೆ ಮಾಡುವ ಮೂಲಕ ನಮ್ಮ ಬದುಕನ್ನು ಹಸನು ಮಾಡಿಕೊಳ್ಳೋಣ’ ಎಂದು ಆಶಿಸಿದರು.</p>.<p>ಶಿವಕುಮಾರ ಸ್ವಾಮೀಜಿ ಎಂದೂ ಜನ್ಮದಿನ ಆಚರಿಸಿಕೊಂಡವರಲ್ಲ. ಭಕ್ತರ ಒತ್ತಾಯದ ಮೇರೆಗೆ ಹುಟ್ಟುಹಬ್ಬ ಆಚರಣೆಯನ್ನು ಗುರುವಂದನಾ ಮಹೋತ್ಸವವಾಗಿ ಆಚರಿಸಲಾಗುತ್ತಿತ್ತು ಎಂದರು.<br /><br />ಶ್ರೀಗಳು ವೈಯಕ್ತಿವಾಗಿ ಏನನ್ನೂ ಬಯಸದೆ ಸಮಾಜಕ್ಕಾಗಿ ದುಡಿದರು. ಸಮಾಜಕ್ಕೆ ಬದುಕನ್ನು ಮುಡುಪಾಗಿಟ್ಟರು. ಶೈಕ್ಷಣಿಕವಾಗಿ ಕ್ರಾಂತಿ ಮಾಡಿದ ಸ್ವಾಮೀಜಿ, ಲಕ್ಷಾಂತರ ಮಕ್ಕಳ ಬದುಕು ಹಸನು ಮಾಡಿದ್ದಾರೆ ಎಂದು ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>