ತುಮಕೂರು: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರು ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಹತ್ತರ ಕಾರ್ಯಗಳಿಂದ ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಅಗಣಿತ ಸೇವೆ ಸಲ್ಲಿಸಿದ್ದಾರೆ ಎಂದು ಆಯುರ್ವೇದ ವೈದ್ಯ ಡಾ.ನಂಜುಂಡ ಸ್ವಾಮಿ ಅಭಿಪ್ರಾಯಪಟ್ಟರು.
ನಗರದ ಅನನ್ಯ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದ ಶಿವಕುಮಾರ ಸ್ವಾಮಿಗಳ ನುಡಿ ನಮನ ಮತ್ತು ಭಕ್ತಿ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ನಿರ್ದೇಶಕ ಪ್ರೊ.ಬಿ.ಎಸ್.ಲಿಂಗರಾಜ್ ಮಾತನಾಡಿ, ‘ಸಮಾಜ ಸೇವೆಯೇ ಶ್ರೀಗಳನ್ನು ದೇವರನ್ನಾಗಿಸಿತ್ತು. ಅದರಲ್ಲಿಯೇ ಆತ್ಮೋನ್ನತಿ ಕಂಡ ಮಹಾನ್ ಸಂತರಾಗಿ ಪರಮಾತ್ಮನ ಸ್ಥಾನವನ್ನು ಪಡೆದು, ನಮ್ಮೆದುರಿನ ಶ್ರೇಷ್ಠ ಜೀವನ ಮಾದರಿಯಾಗಿದ್ದರು’ ಎಂದರು.
ಡಾ.ಶಿವಕುಮಾರ ಸ್ವಾಮಿಗಳ ಜೀವನ ಚರಿತ್ರೆಯನ್ನು ಒಳಗೊಂಡ ಕಿರುನಾಟಕವನ್ನು ಪ್ರದರ್ಶಿಸಲಾಯಿತು.