<p>ತುಮಕೂರು: ಮುಡಾ ನಿವೇಶನ ಹಗರಣ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆ ಮುಂದುವರಿಸಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಶೋಷಿತ ಸಮುದಾಯಗಳು ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳ ಮುಖಂಡರು ಎಚ್ಚರಿಸಿದರು.</p>.<p>ಮುಖಂಡರಾದ ಕೆಂಚಮಾರಯ್ಯ, ಚಿಕ್ಕರಾಜು, ನರಸೀಯಪ್ಪ, ಕುಮಾರಸ್ವಾಮಿ ಇತರರು ಶನಿವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.</p>.<p>ಮುಡಾ ಹಗರಣದ ಕಪ್ಪು ಚುಕ್ಕೆ ಇಟ್ಟು, ರಾಜಕೀಯ ಜೀವನಕ್ಕೆ ಇತಿಶ್ರೀ ಹಾಡಲು ಹೊರಟಿರುವ ಬಿಜೆಪಿ, ಜೆಡಿಎಸ್ ಪಕ್ಷಗಳ ಹುನ್ನಾರ ಕೈಗೂಡಲು ಎಂದಿಗೂ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಮುಕ್ತ–ಕರ್ನಾಟಕ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.</p>.<p>ರಾಜಕೀಯ ದ್ವೇಷದಿಂದ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಮುನ್ನೆಲೆಗೆ ತರಲಾಗಿದೆ. ರಾಜಕೀಯವಾಗಿ ಮುಗಿಸಲು ಮುಂದಾಗಿದ್ದಾರೆ. ಬಡವರು, ಹಿಂದುಳಿದವರಿಗೆ ಶಕ್ತಿ ತುಂಬುವಂತಹ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವರ ಜನಪ್ರಿಯತೆ ಸಹಿಸದೆ ಇಂತಹ ಕೃತ್ಯಕ್ಕೆ ಇಳಿದಿದ್ದಾರೆ. ರಾಜೀನಾಮೆಗೆ ಒತ್ತಾಯಿಸುವುದು ಮುಂದುವರಿದರೆ ಹೋರಾಟ ನಡೆಸಲಾಗುವುದು ಎಂದರು.</p>.<p>ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಜಾರಿಗೆ ತಂದಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜೋತಿ, ವಿದ್ಯಾನಿಧಿ ಯೋಜನೆಗಳು ಅತಿ ಹೆಚ್ಚು ಬಡವರನ್ನು ತಲುಪಿವೆ. ಇದನ್ನು ಸಹಿಸದೆ ಕುತಂತ್ರ ನಡೆಸಿ ಅಧಿಕಾರದಿಂದ ಕೆಳಗೆ ಇಳಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.</p>.<p>ಶೋಷಿತ ಸಮುದಾಯಗಳ ಮುಖಂಡರಾದ ಅರುಂಧತಿ, ಕೆಂಪರಾಜು, ಹೆಬ್ಬೂರು ಶ್ರೀನಿವಾಸಮೂರ್ತಿ, ರೇವಣಸಿದ್ದಯ್ಯ, ಡಿ.ಕೆ.ವೆಂಕಟೇಶ್, ಬಾಲಕೃಷ್ಣಪ್ಪ, ಡ್ಯಾಗೇರಹಳ್ಳಿ ವಿರೂಪಾಕ್ಷ, ಸುನೀಲ್, ಕೆಂಪಣ್ಣ, ಜಯಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಮುಡಾ ನಿವೇಶನ ಹಗರಣ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆ ಮುಂದುವರಿಸಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಶೋಷಿತ ಸಮುದಾಯಗಳು ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳ ಮುಖಂಡರು ಎಚ್ಚರಿಸಿದರು.</p>.<p>ಮುಖಂಡರಾದ ಕೆಂಚಮಾರಯ್ಯ, ಚಿಕ್ಕರಾಜು, ನರಸೀಯಪ್ಪ, ಕುಮಾರಸ್ವಾಮಿ ಇತರರು ಶನಿವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.</p>.<p>ಮುಡಾ ಹಗರಣದ ಕಪ್ಪು ಚುಕ್ಕೆ ಇಟ್ಟು, ರಾಜಕೀಯ ಜೀವನಕ್ಕೆ ಇತಿಶ್ರೀ ಹಾಡಲು ಹೊರಟಿರುವ ಬಿಜೆಪಿ, ಜೆಡಿಎಸ್ ಪಕ್ಷಗಳ ಹುನ್ನಾರ ಕೈಗೂಡಲು ಎಂದಿಗೂ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಮುಕ್ತ–ಕರ್ನಾಟಕ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.</p>.<p>ರಾಜಕೀಯ ದ್ವೇಷದಿಂದ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಮುನ್ನೆಲೆಗೆ ತರಲಾಗಿದೆ. ರಾಜಕೀಯವಾಗಿ ಮುಗಿಸಲು ಮುಂದಾಗಿದ್ದಾರೆ. ಬಡವರು, ಹಿಂದುಳಿದವರಿಗೆ ಶಕ್ತಿ ತುಂಬುವಂತಹ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವರ ಜನಪ್ರಿಯತೆ ಸಹಿಸದೆ ಇಂತಹ ಕೃತ್ಯಕ್ಕೆ ಇಳಿದಿದ್ದಾರೆ. ರಾಜೀನಾಮೆಗೆ ಒತ್ತಾಯಿಸುವುದು ಮುಂದುವರಿದರೆ ಹೋರಾಟ ನಡೆಸಲಾಗುವುದು ಎಂದರು.</p>.<p>ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಜಾರಿಗೆ ತಂದಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜೋತಿ, ವಿದ್ಯಾನಿಧಿ ಯೋಜನೆಗಳು ಅತಿ ಹೆಚ್ಚು ಬಡವರನ್ನು ತಲುಪಿವೆ. ಇದನ್ನು ಸಹಿಸದೆ ಕುತಂತ್ರ ನಡೆಸಿ ಅಧಿಕಾರದಿಂದ ಕೆಳಗೆ ಇಳಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.</p>.<p>ಶೋಷಿತ ಸಮುದಾಯಗಳ ಮುಖಂಡರಾದ ಅರುಂಧತಿ, ಕೆಂಪರಾಜು, ಹೆಬ್ಬೂರು ಶ್ರೀನಿವಾಸಮೂರ್ತಿ, ರೇವಣಸಿದ್ದಯ್ಯ, ಡಿ.ಕೆ.ವೆಂಕಟೇಶ್, ಬಾಲಕೃಷ್ಣಪ್ಪ, ಡ್ಯಾಗೇರಹಳ್ಳಿ ವಿರೂಪಾಕ್ಷ, ಸುನೀಲ್, ಕೆಂಪಣ್ಣ, ಜಯಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>