ಶಿರಾ ನಗರದ ಗ್ರಾಮ ದೇವತೆ ದುರ್ಗಮ್ಮ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿ ಮಾತನಾಡಿದರು, ಮುಖ್ಯಮಂತ್ರಿ ಕುರ್ಚಿಗೆ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಹೋರಾಟ ನಡೆಯುತ್ತಿಲ್ಲ, ಬಿಜೆಪಿ ಪಕ್ಷದಲ್ಲಿ ಸಹ ಹೋರಾಟ ನಡೆಯುತ್ತಿದೆ. ಎಲ್ಲಾ ಪಕ್ಷಗಳಲ್ಲೂ ಇದು ಸರ್ವೇ ಸಾಧಾರಣ. ಚುನಾವಣೆಯಲ್ಲಿ ಜನತೆ ನೀಡುವ ತೀರ್ಪಿಗೆ ಎಲ್ಲರೂ ಬದ್ದವಾಗಬೇಕಾಗುವುದು ಎಂದರು.