ಸಮುದಾಯದ ನಾಯಕರು ಎಂದು ಹೇಳಿಕೊಳ್ಳುವ ಕೆ.ಎಸ್.ಈಶ್ವರಪ್ಪ ಅವರ ಬಿಜೆಪಿ ಪಕ್ಷವೇ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿ ಇದೆ. ಕುಲಶಾಸ್ತ್ರೀಯ ಅಧ್ಯಯನ ವರದಿ ಪಡೆದು, ಕೇಂದ್ರಕ್ಕೆ ತೆಗೆದುಕೊಂಡು ಹೋಗಿ ಮೀಸಲಾತಿ ಕೊಡಿಸಲು ಸಾಧ್ಯವಾಗಿಲ್ಲ. ನಿಮಗೆ ಕುರುಬರ ಬಗ್ಗೆ ಕಾಳಜಿ ಇದ್ದರೆ ಮೊದಲು ಎಸ್ಟಿ ಮೀಸಲಾತಿ ಕೊಡಿಸಿ. ನಿಮ್ಮ ಕೈಯಲ್ಲೇ ಅಧಿಕಾರವಿದ್ದು, ಬೂಟಾಟಿಕೆ, ನಾಟಕ ಬಿಟ್ಟು ಸಾಮರ್ಥ್ಯ ತೋರಿಸಿ ಎಂದು ಈಶ್ವರಪ್ಪ ಅವರಿಗೆ ಸವಾಲು ಹಾಕಿದರು.