<p>ಚಿಕ್ಕನಾಯಕನಹಳ್ಳಿ: ಗುರುಸಿದ್ಧರಾಮೇಶ್ವರರು ಕೆರೆ ಕಟ್ಟೆ ನಿರ್ಮಿಸುವ ಮೂಲಕ ರೈತರಿಗೆ ಅನುಕೂಲ ಮಾಡಿದ್ದರು. ಅಂತರ್ಜಾತಿ ವಿವಾಹ ಮಾಡಿಸುವ ಮೂಲಕ ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದರು ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಎಂ. ಬಿದರಿ ಹೇಳಿದರು.</p>.<p>ತಾಲ್ಲೂಕಿನ ಗೋಡೆಕೆರೆಯಲ್ಲಿ ನಡೆದ ಗುರುಸಿದ್ಧರಾಮೇಶ್ವರರ ಜಯಂತಿಯಲ್ಲಿ ಮಾತನಾಡಿದರು.</p>.<p>ಗುರಸಿದ್ಧರಾಮೇಶ್ವರರು ಜನರಲ್ಲಿನ ಮೌಡ್ಯ, ಜಾತಿ ಪದ್ಧತಿ ತೊಲಗಿಸಿ, ಸಮಾನತೆ ಸಾರಿದರು. ಸಿದ್ಧರಾಮೇಶ್ವರರು 16 ಸಾವಿರ ಕೆರೆ, ಕಟ್ಟೆಗಳನ್ನು ಕಟ್ಟಿಸಿದರು. ಸೊಲ್ಲಾಪುರದಲ್ಲಿ ಭವ್ಯ ವಾದ ದೇವಸ್ಥಾನ ಕಟ್ಟಿಸಿದ್ದಾರೆ ಎಂದರು.</p>.<p>ನೊಳಂಬ ವೀರಶೈವ ಸಮುದಾಯದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ, ಒಳ್ಳೆಯ ಸಂಸ್ಕಾರ ನೀಡಿ, ನಿಮ್ಮ ಸಂಪಾದನೆಯಲ್ಲಿ ಸ್ವಲ್ಪ ಭಾಗವಾದರೂ ಸಮಾಜಕ್ಕೆ ನೀಡಿ ಎಂದು ಸಲಹೆ ನೀಡಿದರು.</p>.<p>ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಸಿದ್ಧರಾಮೇಶ್ವರ ಅವರ ತತ್ವಾದರ್ಶ ಪಾಲಿಸಿ, ಕಾಯಕ ಮಾಡಿ ಬೆಳೆಯುತ್ತೀರಿ. ವೀರಶೈವ ಸಮಾಜ ದಾನ-ಧರ್ಮಕ್ಕೆ ಗುರುತಿಸಿಕೊಂಡಿರುವ ಸಮಾಜ, ಕಷ್ಟದಲ್ಲಿರುವವರನ್ನು ಮೇಲುತ್ತುವುದೇ ವೀರಶೈವ ಸಮಾಜದ ಸಿದ್ದಾಂತ ಎಂದರು.</p>.<p>ಗೋಡೆಕೆರೆ ಮಠದ ಮೃತ್ಯುಂಜಯದೇಶೀಕೇಂದ್ರ ಸ್ವಾಮೀಜಿ, ‘ಯಾವುದೇ ಸಮಾಜ ಅಭಿವೃದ್ಧಿ ಯಾಗಬೇಕು ಎಂದರೆ ಶಿಕ್ಷಣ ಅಗತ್ಯ. ಎಲ್ಲರೂ ಸಂಘಟಿತರಾಗಿ ಸಮಾಜವನ್ನು ಬೆಳೆಸಿರಿ ಎಂದು ಸಲಹೆ ನೀಡಿದರು.</p>.<p>ಮಾಜಿ ಸಚಿವ ಸೊಗಡು ಶಿವಣ್ಣ ಮಾತನಾಡಿ, ‘ಗುರುಸಿದ್ಧರಾಮೇಶ್ವರರ ತತ್ವ ಅನುಸರಿಸಿ ಈಗಿನ ಸಚಿವರು ಚಿ.ನಾ.ಹಳ್ಳಿ ಕೆರೆಗಳಿಗೆ ನೀರು ಹರಿಸುವುದರ ಜೊತೆಗೆ ಜಿಲ್ಲೆಯ ಎಲ್ಲ ಕೆರೆಗಳಿಗೂ ನೀರು ಹರಿಸಿ’ಎಂದರು.</p>.<p>ಶಾಸಕ ಲಿಂಗೇಶ್ ಮಾತನಾಡಿ, ಗುರುಸಿದ್ಧರಾಮೇಶ್ವರರು 68 ಸಾವಿರವಚನ ಬರೆದಿದ್ದಾರೆ. ಆದರೆ ದೊರಕಿರು<br />ವುದು 1,378 ಮಾತ್ರ. ಸಚಿವರು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಗುರಸಿದ್ಧರಾಮೇಶ್ವರರ ಅಧ್ಯಯನ ಪೀಠ ಆರಂಭಿಸಬೇಕು ಎಂದರು.</p>.<p>ಶಾಸಕ ಜ್ಯೋತಿಗಣೇಶ್ ಮಾತನಾಡಿದರು. ಶಾಸಕ ಬಿ.ಸಿ.ನಾಗೇಶ್, ನೊಳಂಬ ವೀರಶೈವ ಸಂಘದ ಅಧ್ಯಕ್ಷ ನಾಗರಾಜು, ಮಾಜಿ ತಾ.ಪಂ.ಅಧ್ಯಕ್ಷ ಹೆಚ್.ಆರ್.ಶಶಿಧರ್, ಮುಖಂಡ ಶಿವರಾಜು, ತಾ.ಪಂ.ಸದಸ್ಯ ಶೈಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ಗುರುಸಿದ್ಧರಾಮೇಶ್ವರರು ಕೆರೆ ಕಟ್ಟೆ ನಿರ್ಮಿಸುವ ಮೂಲಕ ರೈತರಿಗೆ ಅನುಕೂಲ ಮಾಡಿದ್ದರು. ಅಂತರ್ಜಾತಿ ವಿವಾಹ ಮಾಡಿಸುವ ಮೂಲಕ ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದರು ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಎಂ. ಬಿದರಿ ಹೇಳಿದರು.</p>.<p>ತಾಲ್ಲೂಕಿನ ಗೋಡೆಕೆರೆಯಲ್ಲಿ ನಡೆದ ಗುರುಸಿದ್ಧರಾಮೇಶ್ವರರ ಜಯಂತಿಯಲ್ಲಿ ಮಾತನಾಡಿದರು.</p>.<p>ಗುರಸಿದ್ಧರಾಮೇಶ್ವರರು ಜನರಲ್ಲಿನ ಮೌಡ್ಯ, ಜಾತಿ ಪದ್ಧತಿ ತೊಲಗಿಸಿ, ಸಮಾನತೆ ಸಾರಿದರು. ಸಿದ್ಧರಾಮೇಶ್ವರರು 16 ಸಾವಿರ ಕೆರೆ, ಕಟ್ಟೆಗಳನ್ನು ಕಟ್ಟಿಸಿದರು. ಸೊಲ್ಲಾಪುರದಲ್ಲಿ ಭವ್ಯ ವಾದ ದೇವಸ್ಥಾನ ಕಟ್ಟಿಸಿದ್ದಾರೆ ಎಂದರು.</p>.<p>ನೊಳಂಬ ವೀರಶೈವ ಸಮುದಾಯದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ, ಒಳ್ಳೆಯ ಸಂಸ್ಕಾರ ನೀಡಿ, ನಿಮ್ಮ ಸಂಪಾದನೆಯಲ್ಲಿ ಸ್ವಲ್ಪ ಭಾಗವಾದರೂ ಸಮಾಜಕ್ಕೆ ನೀಡಿ ಎಂದು ಸಲಹೆ ನೀಡಿದರು.</p>.<p>ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಸಿದ್ಧರಾಮೇಶ್ವರ ಅವರ ತತ್ವಾದರ್ಶ ಪಾಲಿಸಿ, ಕಾಯಕ ಮಾಡಿ ಬೆಳೆಯುತ್ತೀರಿ. ವೀರಶೈವ ಸಮಾಜ ದಾನ-ಧರ್ಮಕ್ಕೆ ಗುರುತಿಸಿಕೊಂಡಿರುವ ಸಮಾಜ, ಕಷ್ಟದಲ್ಲಿರುವವರನ್ನು ಮೇಲುತ್ತುವುದೇ ವೀರಶೈವ ಸಮಾಜದ ಸಿದ್ದಾಂತ ಎಂದರು.</p>.<p>ಗೋಡೆಕೆರೆ ಮಠದ ಮೃತ್ಯುಂಜಯದೇಶೀಕೇಂದ್ರ ಸ್ವಾಮೀಜಿ, ‘ಯಾವುದೇ ಸಮಾಜ ಅಭಿವೃದ್ಧಿ ಯಾಗಬೇಕು ಎಂದರೆ ಶಿಕ್ಷಣ ಅಗತ್ಯ. ಎಲ್ಲರೂ ಸಂಘಟಿತರಾಗಿ ಸಮಾಜವನ್ನು ಬೆಳೆಸಿರಿ ಎಂದು ಸಲಹೆ ನೀಡಿದರು.</p>.<p>ಮಾಜಿ ಸಚಿವ ಸೊಗಡು ಶಿವಣ್ಣ ಮಾತನಾಡಿ, ‘ಗುರುಸಿದ್ಧರಾಮೇಶ್ವರರ ತತ್ವ ಅನುಸರಿಸಿ ಈಗಿನ ಸಚಿವರು ಚಿ.ನಾ.ಹಳ್ಳಿ ಕೆರೆಗಳಿಗೆ ನೀರು ಹರಿಸುವುದರ ಜೊತೆಗೆ ಜಿಲ್ಲೆಯ ಎಲ್ಲ ಕೆರೆಗಳಿಗೂ ನೀರು ಹರಿಸಿ’ಎಂದರು.</p>.<p>ಶಾಸಕ ಲಿಂಗೇಶ್ ಮಾತನಾಡಿ, ಗುರುಸಿದ್ಧರಾಮೇಶ್ವರರು 68 ಸಾವಿರವಚನ ಬರೆದಿದ್ದಾರೆ. ಆದರೆ ದೊರಕಿರು<br />ವುದು 1,378 ಮಾತ್ರ. ಸಚಿವರು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಗುರಸಿದ್ಧರಾಮೇಶ್ವರರ ಅಧ್ಯಯನ ಪೀಠ ಆರಂಭಿಸಬೇಕು ಎಂದರು.</p>.<p>ಶಾಸಕ ಜ್ಯೋತಿಗಣೇಶ್ ಮಾತನಾಡಿದರು. ಶಾಸಕ ಬಿ.ಸಿ.ನಾಗೇಶ್, ನೊಳಂಬ ವೀರಶೈವ ಸಂಘದ ಅಧ್ಯಕ್ಷ ನಾಗರಾಜು, ಮಾಜಿ ತಾ.ಪಂ.ಅಧ್ಯಕ್ಷ ಹೆಚ್.ಆರ್.ಶಶಿಧರ್, ಮುಖಂಡ ಶಿವರಾಜು, ತಾ.ಪಂ.ಸದಸ್ಯ ಶೈಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>