<p><strong>ತುಮಕೂರು:</strong> ಸಿದ್ದರಾಮೇಶ್ವರರು ಕೇವಲ ಒಬ್ಬ ವ್ಯಕ್ತಿಯಲ್ಲ, ಸಮಾಜ ರೂಪಿಸುವ ಶಕ್ತಿ. ಯುವ ಸಮೂಹ ಅವರ ಆದರ್ಶ ಅಳವಡಿಸಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಸಲಹೆ ಮಾಡಿದರು.</p>.<p>ನಗರದಲ್ಲಿ ಬುಧವಾರ ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭೋವಿ ಸಮುದಾಯದ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕಾಯಕವೇ ಕೈಲಾಸ ಎಂಬ ತತ್ವ ನಂಬಿದ್ದರು. ಶ್ರಮ, ನಿಷ್ಠೆ ಮತ್ತು ನೀತಿಯ ಮೂಲಕ ಸೊಲ್ಲಾಪುರವನ್ನು ಕೈಲಾಸದಂತೆ ರೂಪಿಸಿದರು. ಕಾಯಕ ನಂಬಿ ಸಾಗಿದರೆ ಸಮಾಜವನ್ನು ಹೇಗೆ ಉತ್ತಮ ದಿಕ್ಕಿನಲ್ಲಿ ಬದಲಾಯಿಸಬಹುದು ಎಂಬುದಕ್ಕೆ ಅವರು ಉದಾಹರಣೆ ಎಂದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ‘ಇಂದಿನ ಯುವ ಸಮೂಹಕ್ಕೆ ಸಿದ್ದರಾಮೇಶ್ವರರ ಬದುಕಿನ ಕುರಿತು ತಿಳಿಸಲು ಜಯಂತಿ ಆಚರಿಸಲಾಗುತ್ತಿದೆ. ಕೆರೆ, ಬಾವಿ, ಕಟ್ಟಡ, ಇತರೆ ಮೂಲಭೂತ ಸೌಕರ್ಯ ಕಲ್ಪಿಸಿ ತಮ್ಮ ಜೀವನವನ್ನು ಜನಸೇವೆಗೆ ಸಮರ್ಪಿಸಿದ್ದರು’ ಎಂದು ಸ್ಮರಿಸಿದರು.</p>.<p>ಭೋವಿ ಸಮುದಾಯದ ಮುಖಂಡರಾದ ಮಂಜುನಾಥ್, ಊರುಕೆರೆ ಉಮೇಶ್, ವಿಶ್ವನಾಥ್, ಪಿ.ಜಿ.ವೆಂಕಟಸ್ವಾಮಿ, ಎ.ಎಚ್.ಹನುಮಂತರಾಯಪ್ಪ, ಪುರುಷೋತ್ತಮ್, ಕಾಶಿನಾಥ್, ಗೋವಿಂದರಾಜು, ಗಿರಿಯಪ್ಪ, ಕೃಷ್ಣಮೂರ್ತಿ, ತಿಪ್ಪೇಸ್ವಾಮಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸಿದ್ದರಾಮೇಶ್ವರರು ಕೇವಲ ಒಬ್ಬ ವ್ಯಕ್ತಿಯಲ್ಲ, ಸಮಾಜ ರೂಪಿಸುವ ಶಕ್ತಿ. ಯುವ ಸಮೂಹ ಅವರ ಆದರ್ಶ ಅಳವಡಿಸಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಸಲಹೆ ಮಾಡಿದರು.</p>.<p>ನಗರದಲ್ಲಿ ಬುಧವಾರ ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭೋವಿ ಸಮುದಾಯದ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕಾಯಕವೇ ಕೈಲಾಸ ಎಂಬ ತತ್ವ ನಂಬಿದ್ದರು. ಶ್ರಮ, ನಿಷ್ಠೆ ಮತ್ತು ನೀತಿಯ ಮೂಲಕ ಸೊಲ್ಲಾಪುರವನ್ನು ಕೈಲಾಸದಂತೆ ರೂಪಿಸಿದರು. ಕಾಯಕ ನಂಬಿ ಸಾಗಿದರೆ ಸಮಾಜವನ್ನು ಹೇಗೆ ಉತ್ತಮ ದಿಕ್ಕಿನಲ್ಲಿ ಬದಲಾಯಿಸಬಹುದು ಎಂಬುದಕ್ಕೆ ಅವರು ಉದಾಹರಣೆ ಎಂದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ‘ಇಂದಿನ ಯುವ ಸಮೂಹಕ್ಕೆ ಸಿದ್ದರಾಮೇಶ್ವರರ ಬದುಕಿನ ಕುರಿತು ತಿಳಿಸಲು ಜಯಂತಿ ಆಚರಿಸಲಾಗುತ್ತಿದೆ. ಕೆರೆ, ಬಾವಿ, ಕಟ್ಟಡ, ಇತರೆ ಮೂಲಭೂತ ಸೌಕರ್ಯ ಕಲ್ಪಿಸಿ ತಮ್ಮ ಜೀವನವನ್ನು ಜನಸೇವೆಗೆ ಸಮರ್ಪಿಸಿದ್ದರು’ ಎಂದು ಸ್ಮರಿಸಿದರು.</p>.<p>ಭೋವಿ ಸಮುದಾಯದ ಮುಖಂಡರಾದ ಮಂಜುನಾಥ್, ಊರುಕೆರೆ ಉಮೇಶ್, ವಿಶ್ವನಾಥ್, ಪಿ.ಜಿ.ವೆಂಕಟಸ್ವಾಮಿ, ಎ.ಎಚ್.ಹನುಮಂತರಾಯಪ್ಪ, ಪುರುಷೋತ್ತಮ್, ಕಾಶಿನಾಥ್, ಗೋವಿಂದರಾಜು, ಗಿರಿಯಪ್ಪ, ಕೃಷ್ಣಮೂರ್ತಿ, ತಿಪ್ಪೇಸ್ವಾಮಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>