<p><strong>ತುಮಕೂರು: </strong>ವಿಶೇಷ ಪೂಜೆ, ವಿವಿಧ ವಾದ್ಯಗಳ ಸ್ವರನಾದ, ಭಕ್ತಿಗೀತೆಗಳ ಗಾಯನ, ಡಿ.ಜೆ.ಶಬ್ದಕಂಪನದೊಂದಿಗೆ ನೃತ್ಯ, ಜೈಕಾರಗಳ ಸುರಿಮಳೆಯೊಂದಿಗೆ 43ನೇ ವರ್ಷದ ಸಿದ್ಧಿ ವಿನಾಯಕ ವಿಸರ್ಜನಾ ಮಹೋತ್ಸವ ನಗರದಲ್ಲಿ ಗುರುವಾರ ನೆರವೇರಿತು.</p>.<p>ಸಿದ್ಧಿ ವಿನಾಯಕ ಸೇವಾ ಮಂಡಳಿ ಆಯೋಜಿಸಿದ್ದ ಈ ಉತ್ಸವದಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಸಾರ್ವಜನಿಕರು ದಾರಿಯ ಇಕ್ಕೆಲಗಳಲ್ಲಿ ನಿಂತು, ಮಹಡಿಗಳ ಮೇಲೆ ಕೂತು ಗಣೇಶನ ಮೆರವಣಿಗೆ ಕಣ್ತುಂಬಿಕೊಂಡರು. ಮೆರವಣಿಗೆಯಲ್ಲಿದ್ದ ವಿದ್ಯುತ್ಚಾಲಿತ ಚಲನೆಯುಳ್ಳ ಶಿವನ ಪ್ರತಿಮೆ ಎಲ್ಲರ ಗಮನ ಸೆಳೆಯಿತು.</p>.<p>ಚಂಡೆ, ನಗಾರಿ, ತಮಟೆಗಳ ಸಪ್ಪಳ ಜನರಿಗೆ ಕರ್ಣಾನಂದ ನೀಡಿತು. ಪಟ ಕುಣಿತ, ಗೊಂಬೆ ಕುಣಿತ, ಕರಗ ನೃತ್ಯ, ವೀರಗಾಸೆ ಕಣ್ಮನ ಸೆಳೆದವು. ಉತ್ಸಾಹಿಗಳು ನಾಸಿಕ್ ಡೋಲ್ಗಳ ನಾದಕ್ಕೆ ಹೆಜ್ಜೆ ಹಾಕಿದರು.</p>.<p>ವಿನಾಯಕ ವಿಸರ್ಜನಾ ಮಹೋತ್ಸವಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಕೆ.ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ ಅವರು ಬೆಳಿಗ್ಗೆ 11.30ಕ್ಕೆ ಚಾಲನೆ ನೀಡಿದರು. ರಾತ್ರಿ 10 ಗಂಟೆಯ ಹೊತ್ತಿಗೆ ಮೆರವಣಿಗೆ ಕೆ.ಎನ್.ಎಸ್. ಕಲ್ಯಾಣಿಗೆ ತಲುಪಿತು.</p>.<p>ಕಾಲ್ಟೆಕ್ಸ್ ವೃತ್ತ, ಬಿ.ಎಚ್.ರಸ್ತೆ, ಎಂ.ಜಿ.ರಸ್ತೆ, ಹೊರಪೇಟೆ ವೃತ್ತ, ಗುಂಚಿ ವೃತ್ತ, ಚರ್ಚ್ ವೃತ್ತ, ಮಂಡಿಪೇಟೆ, ಆಯಿಲ್ ಮಿಲ್ ರಸ್ತೆ, ಕೋಟೆ ಆಂಜನೇಯ ವೃತ್ತದ ಮೂಲಕ ಮೆರವಣಿಗೆ ಸಾಗಿತು. ಗಾರ್ಡನ್ ರಸ್ತೆಯ ಕೆ.ಎನ್.ಎಸ್. ಕಲ್ಯಾಣಿಯಲ್ಲಿ ಪೂಜೆ ನೆರವೇರಿಸಿ ಗಣೇಶನನ್ನು ವಿಸರ್ಜನೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ವಿಶೇಷ ಪೂಜೆ, ವಿವಿಧ ವಾದ್ಯಗಳ ಸ್ವರನಾದ, ಭಕ್ತಿಗೀತೆಗಳ ಗಾಯನ, ಡಿ.ಜೆ.ಶಬ್ದಕಂಪನದೊಂದಿಗೆ ನೃತ್ಯ, ಜೈಕಾರಗಳ ಸುರಿಮಳೆಯೊಂದಿಗೆ 43ನೇ ವರ್ಷದ ಸಿದ್ಧಿ ವಿನಾಯಕ ವಿಸರ್ಜನಾ ಮಹೋತ್ಸವ ನಗರದಲ್ಲಿ ಗುರುವಾರ ನೆರವೇರಿತು.</p>.<p>ಸಿದ್ಧಿ ವಿನಾಯಕ ಸೇವಾ ಮಂಡಳಿ ಆಯೋಜಿಸಿದ್ದ ಈ ಉತ್ಸವದಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಸಾರ್ವಜನಿಕರು ದಾರಿಯ ಇಕ್ಕೆಲಗಳಲ್ಲಿ ನಿಂತು, ಮಹಡಿಗಳ ಮೇಲೆ ಕೂತು ಗಣೇಶನ ಮೆರವಣಿಗೆ ಕಣ್ತುಂಬಿಕೊಂಡರು. ಮೆರವಣಿಗೆಯಲ್ಲಿದ್ದ ವಿದ್ಯುತ್ಚಾಲಿತ ಚಲನೆಯುಳ್ಳ ಶಿವನ ಪ್ರತಿಮೆ ಎಲ್ಲರ ಗಮನ ಸೆಳೆಯಿತು.</p>.<p>ಚಂಡೆ, ನಗಾರಿ, ತಮಟೆಗಳ ಸಪ್ಪಳ ಜನರಿಗೆ ಕರ್ಣಾನಂದ ನೀಡಿತು. ಪಟ ಕುಣಿತ, ಗೊಂಬೆ ಕುಣಿತ, ಕರಗ ನೃತ್ಯ, ವೀರಗಾಸೆ ಕಣ್ಮನ ಸೆಳೆದವು. ಉತ್ಸಾಹಿಗಳು ನಾಸಿಕ್ ಡೋಲ್ಗಳ ನಾದಕ್ಕೆ ಹೆಜ್ಜೆ ಹಾಕಿದರು.</p>.<p>ವಿನಾಯಕ ವಿಸರ್ಜನಾ ಮಹೋತ್ಸವಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಕೆ.ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ ಅವರು ಬೆಳಿಗ್ಗೆ 11.30ಕ್ಕೆ ಚಾಲನೆ ನೀಡಿದರು. ರಾತ್ರಿ 10 ಗಂಟೆಯ ಹೊತ್ತಿಗೆ ಮೆರವಣಿಗೆ ಕೆ.ಎನ್.ಎಸ್. ಕಲ್ಯಾಣಿಗೆ ತಲುಪಿತು.</p>.<p>ಕಾಲ್ಟೆಕ್ಸ್ ವೃತ್ತ, ಬಿ.ಎಚ್.ರಸ್ತೆ, ಎಂ.ಜಿ.ರಸ್ತೆ, ಹೊರಪೇಟೆ ವೃತ್ತ, ಗುಂಚಿ ವೃತ್ತ, ಚರ್ಚ್ ವೃತ್ತ, ಮಂಡಿಪೇಟೆ, ಆಯಿಲ್ ಮಿಲ್ ರಸ್ತೆ, ಕೋಟೆ ಆಂಜನೇಯ ವೃತ್ತದ ಮೂಲಕ ಮೆರವಣಿಗೆ ಸಾಗಿತು. ಗಾರ್ಡನ್ ರಸ್ತೆಯ ಕೆ.ಎನ್.ಎಸ್. ಕಲ್ಯಾಣಿಯಲ್ಲಿ ಪೂಜೆ ನೆರವೇರಿಸಿ ಗಣೇಶನನ್ನು ವಿಸರ್ಜನೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>