<p>ಶಿರಾ: ನಗರದ ಸಿರಿಗಂಧ ಪ್ಯಾಲೇಸ್ನಲ್ಲಿ ಜೂನ್ 19ರಂದು ಜನರೊಂದಿಗೆ ಜನತಾದಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಸಮಿತಿ ಅಧ್ಯಕ್ಷ ಆರ್.ಉಗ್ರೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ ಹಾಗೂ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್.ಸತ್ಯಪ್ರಕಾಶ್ ಹೇಳಿದರು.</p>.<p>ಯುವಜನತಾದಳದ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ಮಿಸ್ಡ್ಕಾಲ್ ಸದಸ್ಯತ್ವ ಅಭಿಯಾನ ಹಾಗೂ ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಚಾಲನೆ ನೀಡುವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಬಡವರ ಪರವಾದ ಜನಪರ ಯೋಜನೆಗಳು ತಟಸ್ಥವಾಗಿದ್ದು, ಸಾಮಾನ್ಯ ಜನತೆ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಮಯದಲ್ಲಿ ಸಾಮಾನ್ಯ ಜನರ ಪರವಾಗಿ ಜೆಡಿಎಸ್ ನಿಂತು ಅವರಿಗೆ ನ್ಯಾಯ ಕಲ್ಪಿಸಲು ಹೋರಾಟ ಹಮ್ಮಿಕೊಳ್ಳಲಿದೆ ಎಂದರು.</p>.<p>ಜಿ.ಪಂ ಮಾಜಿ ಉಪಾಧ್ಯಕ್ಷ ಮುಡಿಮಡು ರಂಗಶ್ವಾಮಯ್ಯ, ನಗರಸಭೆ ಸದಸ್ಯರಾದ ಆರ್.ರಾಮು, ಅಂಜಿನಪ್ಪ, ಆರ್.ರಾಘವೇಂದ್ರ, ಮುಖಂಡರಾದ ನರಸಿಂಹಮೂರ್ತಿ, ಉದಯಶಂಕರ್, ರಂಗನಾಥ ಗೌಡ, ರಂಗನಾಥಪ್ಪ, ಶ್ರೀಧರ್, ಶ್ರೀರಂಗ, ಸುನೀಲ್, ನಟರಾಜು, ರೇಣುಕಮ್ಮ ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ನಗರದ ಸಿರಿಗಂಧ ಪ್ಯಾಲೇಸ್ನಲ್ಲಿ ಜೂನ್ 19ರಂದು ಜನರೊಂದಿಗೆ ಜನತಾದಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಸಮಿತಿ ಅಧ್ಯಕ್ಷ ಆರ್.ಉಗ್ರೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ ಹಾಗೂ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್.ಸತ್ಯಪ್ರಕಾಶ್ ಹೇಳಿದರು.</p>.<p>ಯುವಜನತಾದಳದ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ಮಿಸ್ಡ್ಕಾಲ್ ಸದಸ್ಯತ್ವ ಅಭಿಯಾನ ಹಾಗೂ ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಚಾಲನೆ ನೀಡುವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಬಡವರ ಪರವಾದ ಜನಪರ ಯೋಜನೆಗಳು ತಟಸ್ಥವಾಗಿದ್ದು, ಸಾಮಾನ್ಯ ಜನತೆ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಮಯದಲ್ಲಿ ಸಾಮಾನ್ಯ ಜನರ ಪರವಾಗಿ ಜೆಡಿಎಸ್ ನಿಂತು ಅವರಿಗೆ ನ್ಯಾಯ ಕಲ್ಪಿಸಲು ಹೋರಾಟ ಹಮ್ಮಿಕೊಳ್ಳಲಿದೆ ಎಂದರು.</p>.<p>ಜಿ.ಪಂ ಮಾಜಿ ಉಪಾಧ್ಯಕ್ಷ ಮುಡಿಮಡು ರಂಗಶ್ವಾಮಯ್ಯ, ನಗರಸಭೆ ಸದಸ್ಯರಾದ ಆರ್.ರಾಮು, ಅಂಜಿನಪ್ಪ, ಆರ್.ರಾಘವೇಂದ್ರ, ಮುಖಂಡರಾದ ನರಸಿಂಹಮೂರ್ತಿ, ಉದಯಶಂಕರ್, ರಂಗನಾಥ ಗೌಡ, ರಂಗನಾಥಪ್ಪ, ಶ್ರೀಧರ್, ಶ್ರೀರಂಗ, ಸುನೀಲ್, ನಟರಾಜು, ರೇಣುಕಮ್ಮ ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>