ಅತಿ ಕಿರಿಯ ವಯಸ್ಸಿನಲ್ಲಿಯೇ ಸ್ವಾಮೀಜಿ ಅವರು ನೀರಾವರಿ ಬಗ್ಗೆ ನಡೆಸುತ್ತಿರುವ ಹೋರಾಟವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ , ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ ಸದಾನಂದಗೌಡ, ಸಚಿವ ಡಿ.ಕೆ.ಶಿವಕುಮಾರ್, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಶ್ಲಾಘಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.