ಕ್ಷೇತ್ರವನ್ನು ಮತ್ತೆ ಪಡೆಯಲು ಕಾಂಗ್ರೆಸ್ ಸಹ ತೀವ್ರ ಕಸರತ್ತು ನಡೆಸಿದೆ. ಅನುಭವಿ ರಾಜಕಾರಣಿ ಟಿ.ಬಿ. ಜಯಚಂದ್ರ ಕಣದಲ್ಲಿದ್ದು ಹಿಂದೆ ತಾವು ಮಾಡಿರುವ ಅಭಿವೃದ್ಧಿಯ ಮೇಲೆ ಮತಯಾಚನೆ ಮಾಡಿದ್ದಾರೆ. ಜೊತೆಗೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಪ್ರಚಾರ ನಡೆಸಿ ಹೋಗಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರಾದ ಡಾ.ಜಿ. ಪರಮೇಶ್ವರ, ಕೆ.ಎನ್. ರಾಜಣ್ಣ ಹಿಂದಿನ ಮನಸ್ತಾಪವನ್ನು ಮರೆತು ಒಗ್ಗಟ್ಟಿನಿಂದ ಪ್ರಚಾರದಲ್ಲಿ ತೊಡಗಿಸಿಕೊಂಡು ಮತದಾರರನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ.