ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಮಧುಗಿರಿ ಶಾಸಕ ಎಂ.ವಿ. ವೀರಭದ್ರಯ್ಯ ಅವರ ಕೈಮರದಲ್ಲಿ ಇರುವ ಮನೆಯಲ್ಲಿ ಭಾನುವಾರ ರಾತ್ರಿ ತಂಗಿದ್ದರು. ಸೋಮವಾರ ಮಧ್ಯಾಹ್ನದವರೆಗೂ ಇದ್ದು, ಎಲ್ಲಾ ಉಸ್ತುವಾರಿಯನ್ನು ನೋಡಿಕೊಂಡು ಬೆಂಗಳೂರಿಗೆ ಹೋಗಿದ್ದಾರೆ. ಶಿರಾದ ಕೆಲ ಹೋಬಳಿಗಳ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಜ್ವಲ್ ರೇವಣ್ಣ, ಹಿರಿಯೂರು ಬಳಿ ವಾಸ್ತವ ಮಾಡಿದ್ದು, ಅಲ್ಲಿಂದಲೇ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ. ಉಳಿದ ನಾಯಕರು ತಮ್ಮ ಊರುಗಳಿಗೆ ಮರಳಿದ್ದಾರೆ.