ಶಿರಾ: ರಾಷ್ಟ್ರೀಯ ಹೆದ್ದಾರಿ–48ರ ಶಿರಾ ಬೈಪಾಸ್ನಲ್ಲಿ ಶನಿವಾರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ದಂಪತಿ ಮೃತಪಟ್ಟಿದ್ದಾರೆ.
ಹಾವೇರಿ ಮೂಲದ ವಿನಾಯಕಸ್ವಾಮಿ ಬೆಳಗಿ ಹಾಗೂ ಅವರ ಪತ್ನಿ ಶಿಲ್ಪ ಮೃತರು. ಸಾಪ್ಟ್ವೇರ್ ಎಂಜಿನಿಯರ್ ಆಗಿದ್ದು, ಬೆಂಗಳೂರಿನ ಅಂತನಕೆರೆಯ ಎಂ.ಎಸ್.ರಾಯಲ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದಾರೆ. ಹಾವೇರಿಯಿಂದ ಬೆಂಗಳೂರಿಗೆ ವ್ಯಾಗನರ್ ಕಾರಿನಲ್ಲಿ ತೆರಳುತ್ತಿದ್ದ ಸಮಯದಲ್ಲಿ ಕಾರಿನ ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಶಿಲ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರು ಚಾಲನೆ ಮಾಡುತ್ತಿದ್ದ ವಿನಾಯಕ ಸ್ವಾಮಿಬೆಳಗಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುತ್ತಿದ್ದ ಸಮಯದಲ್ಲಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇವರ ಪುತ್ರಿ ಶಿವಾಸ್ (5) ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ.