<p><strong>ಶಿರಾ:</strong> ತಾಲ್ಲೂಕಿನ ಗೌಡಗೆರೆ ಗ್ರಾ.ಪಂ ವ್ಯಾಪ್ತಿಯ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ವ್ಯಾಪಕವಾಗಿದೆ.</p>.<p>ಹೊನ್ನೇನಹಳ್ಳಿಯಲ್ಲಿ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, 15 ದಿನದಿಂದ ಸಮಸ್ಯೆ ಬಿಗಡಾಯಿಸಿದೆ. ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಎರಡು ಕೊಳವೆಬಾವಿಗಳಲ್ಲಿ ನೀರು ಕಡಿಮೆಯಾಗಿದ್ದು ಸಮಸ್ಯೆಗೆ ಕಾರಣವಾಗಿದೆ.</p>.<p>ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎನ್ನುವುದು ಗ್ರಾಮಸ್ಥರ ದೂರು.</p>.<p>ಗ್ರಾಮದಲ್ಲಿ ಎರಡು ಸಾವಿರ ಜನಸಂಖ್ಯೆಯಿದ್ದು ಇದರ ಜೊತೆಗೆ ಜಾನುವಾರುಗಳು ಇರುವುದರಿಂದ ನೀರಿಗಾಗಿ ಸಂಕಷ್ಟ ಹೆಚ್ಚು ಮಾಡಿದೆ. ಗ್ರಾಮಕ್ಕೆ ಹೊಂದಿಕೊಂಡಂತೆ ಎರಡು ಗೊಲ್ಲರ ಹಟ್ಟಿಗಳಿದ್ದು ಇವರ ನೋವನ್ನು ಕೇಳುವರು ಯಾರು ಇಲ್ಲದಂತಾಗಿದೆ.</p>.<p>ಗ್ರಾಮದ ಜನತೆ ಕುಡಿಯುವ ನೀರಿಗಾಗಿ ಖಾಸಗಿಯವರ ಜಮೀನಿನಲ್ಲಿರುವ ಕೊಳವೆಬಾವಿಗಳಿಂದ ನೀರು ತರಬೇಕಿದೆ. ಯುಗಾದಿ ಸಮಯದಲ್ಲಿ ಕುಡಿಯುವ ನೀರಿಗೆ ಪರದಾಡುತ್ತಿದ್ದು ಪಂಚಾಯಿತಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಖಾಸಗಿಯವರು ತಮ್ಮ ಕೊಳವೆಬಾವಿಯಿಂದ ಟ್ಯಾಂಕರ್ನಲ್ಲಿ ನೀರು ತಂದು ಜನರಿಗೆ ನೀಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿನ ಗೌಡಗೆರೆ ಗ್ರಾ.ಪಂ ವ್ಯಾಪ್ತಿಯ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ವ್ಯಾಪಕವಾಗಿದೆ.</p>.<p>ಹೊನ್ನೇನಹಳ್ಳಿಯಲ್ಲಿ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, 15 ದಿನದಿಂದ ಸಮಸ್ಯೆ ಬಿಗಡಾಯಿಸಿದೆ. ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಎರಡು ಕೊಳವೆಬಾವಿಗಳಲ್ಲಿ ನೀರು ಕಡಿಮೆಯಾಗಿದ್ದು ಸಮಸ್ಯೆಗೆ ಕಾರಣವಾಗಿದೆ.</p>.<p>ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎನ್ನುವುದು ಗ್ರಾಮಸ್ಥರ ದೂರು.</p>.<p>ಗ್ರಾಮದಲ್ಲಿ ಎರಡು ಸಾವಿರ ಜನಸಂಖ್ಯೆಯಿದ್ದು ಇದರ ಜೊತೆಗೆ ಜಾನುವಾರುಗಳು ಇರುವುದರಿಂದ ನೀರಿಗಾಗಿ ಸಂಕಷ್ಟ ಹೆಚ್ಚು ಮಾಡಿದೆ. ಗ್ರಾಮಕ್ಕೆ ಹೊಂದಿಕೊಂಡಂತೆ ಎರಡು ಗೊಲ್ಲರ ಹಟ್ಟಿಗಳಿದ್ದು ಇವರ ನೋವನ್ನು ಕೇಳುವರು ಯಾರು ಇಲ್ಲದಂತಾಗಿದೆ.</p>.<p>ಗ್ರಾಮದ ಜನತೆ ಕುಡಿಯುವ ನೀರಿಗಾಗಿ ಖಾಸಗಿಯವರ ಜಮೀನಿನಲ್ಲಿರುವ ಕೊಳವೆಬಾವಿಗಳಿಂದ ನೀರು ತರಬೇಕಿದೆ. ಯುಗಾದಿ ಸಮಯದಲ್ಲಿ ಕುಡಿಯುವ ನೀರಿಗೆ ಪರದಾಡುತ್ತಿದ್ದು ಪಂಚಾಯಿತಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಖಾಸಗಿಯವರು ತಮ್ಮ ಕೊಳವೆಬಾವಿಯಿಂದ ಟ್ಯಾಂಕರ್ನಲ್ಲಿ ನೀರು ತಂದು ಜನರಿಗೆ ನೀಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>