ನಗರದಲ್ಲಿ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಕೆಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಶೀಘ್ರ ನಗರೋತ್ಥಾನ ಯೋಜನೆಯಲ್ಲಿ ಸಿಗ್ನಲ್ ಲೈಟ್ ಅಳವಡಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಲಾಗುವುದು.
ರುದ್ರೇಶ್, ನಗರಸಭೆ ಪೌರಾಯುಕ್ತ
ಶಿರಾದಲ್ಲಿ ಸಂಚಾರಿ ಪೊಲೀಸ್ ಠಾಣೆ ಅತ್ಯವಶ್ಯವಾಗಿದ್ದು ತಕ್ಷಣ ಪ್ರಾರಂಭಿಸಬೇಕು. ನಗರದಲ್ಲಿ ಅಸ್ತವ್ಯಸ್ತವಾಗಿರುವ ಸಂಚಾರ ವ್ಯವಸ್ಥೆ ಸರಿಪಡಿಸಲು ಸಂಚಾರಿ ಪರಿಣಿತರನ್ನು ಕರೆಸಿ ಅವರಿಂದ ಸೂಕ್ತ ಸಲಹೆ ಪಡೆದು ಕ್ರಮ ಕೈಗೊಳ್ಳಬೇಕು.
ಎಚ್.ಗುರುಮೂರ್ತಿಗೌಡ, ವಕೀಲರ ಸಂಘದ ಅಧ್ಯಕ್ಷ
ಸಂಚಾರ ವ್ಯವಸ್ಥೆ ಸುಗಮಗೊಳಿಸಲು ನಗರಸಭೆ ಸಂಪೂರ್ಣ ವಿಫಲವಾಗಿದೆ. ನಗರಸಭೆ ಜನರಿಗೆ ಸೌಲಭ್ಯ ನೀಡುವುದಕ್ಕಿಂತ ತಮ್ಮ ವೈಯಕ್ತಿಕ ಲಾಭಕ್ಕೆ ಒತ್ತು ನೀಡುತ್ತಿದ್ದಾರೆ. ಕಣ್ಣು ಮುಂದೆಯೇ ಅಕ್ರಮ ಕಟ್ಟಡಗಳು ತಲೆ ಎತ್ತುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ.
ರವಿಶಂಕರ್, ನಗರಸಭೆ ಮಾಜಿ ಸದಸ್ಯ
ಸಿಬ್ಬಂದಿ ಕೊರತೆ ನಡುವೆಯೂ ಪೊಲೀಸರು ಸಂಚಾರ ನಿಯಂತ್ರಣ ಮಾಡುತ್ತಿದ್ದರೂ ಸಮಸ್ಯೆ ಬಗೆಹರಿದಿಲ್ಲ. ನಗರಸಭೆ ಪೊಲೀಸ್ ಇಲಾಖೆ ಒಟ್ಟಿಗೆ ಶ್ರಮಿಸುವುದರ ಜೊತೆಗೆ ಸಾರ್ವಜನಿಕರ ಸಹಕಾರವೂ ಅಗತ್ಯ.
ಬರಗೂರು ಶಿವಕುಮಾರ್, ಶಿರಾ
ಶಿರಾದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಪಕ್ಕ ರಸ್ತೆಯಲ್ಲಿ ನಡೆಯುವ ಹೂವಿನ ಮಾರುಕಟ್ಟೆ
ಹಳೆ ರಾಷ್ಟ್ರೀಯ ಹೆದ್ದಾರಿ– 4ರಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ