ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ ಬಳಿ ರಸ್ತೆ ಅಪಘಾತ: ಮೂವರ ಸಾವು

Last Updated 27 ಡಿಸೆಂಬರ್ 2020, 6:11 IST
ಅಕ್ಷರ ಗಾತ್ರ

ಶಿರಾ (ತುಮಕೂರು ಜಿ): ರಾಷ್ಟ್ರೀಯ ಹೆದ್ದಾರಿ 48 ರ ಗಾಂಧಿನಗರ ಸಮೀಪ‌ ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ.

ಶಿರಾ ಕಡೆಯಿಂದ ತಮಿಳುನಾಡಿಗೆ ಕ್ಯಾಂಟರ್ ನಲ್ಲಿ ಭತ್ತ ಕಟಾವು ಮಾಡಯವ ಯಂತ್ರವನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು. ಕ್ಯಾಂಟರ್ ಹಿಂಬದಿ ಚಕ್ರ ಪಂಚರ್ ಆಗಿದೆ. ಚಕ್ರ ಬದಲಿಸಲು ಚಾಲಕ ಮುಂದಾಗಿದ್ದಾರೆ. ಈ ವೇಳೆ ಬಳ್ಳಾರಿಯಿಂದ ಬೆಂಗಳೂರಿಗೆಮೊಟ್ಟೆ ತುಂಬಿಕೊಂಡು ಸಾಗುತ್ತಿದ್ದ ಲಾರಿ ಕ್ಯಾಂಟರ್ ಗೆ ಡಿಕ್ಕಿಯಾಗಿದೆ.

ಕ್ಯಾಂಟರ್ ಲಾರಿಯಲ್ಲಿದ್ದ ಭತ್ತ ಕಟಾವು ಮಾಡುವ ಯಂತ್ರದ ಆಪರೇಟರ್ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕು ಹೊಳೆಅನ್ನೇರಿ ಗ್ರಾಮದ ನಿಂಗರಾಜು (22)ಹಾಗೂ ದಾವಣಗೆರೆ ತಾಲ್ಲೂಕಿನ ಸ್ಯಾಗಳಿ ಗ್ರಾಮದ ಶ್ರೀನಿವಾಸ್ (22)ಮತ್ತುಲಾರಿ ಚಾಲಕ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಮಹೇಶ್ (25)ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.ಕಳ್ಳಂಬೆಳ್ಳ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT