<p><strong>ಶಿರಾ:</strong> ನಗರದ ಹೊರವಲಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಸಲುವಾಗಿ ಕೆ.ಎಸ್.ಸಿ.ಎ ಪ್ರತಿನಿಧಿಗಳ ಜೊತೆ ಶಾಸಕ ಟಿ.ಬಿ.ಜಯಚಂದ್ರ ಮಂಗಳವಾರ ಪರಿಶೀಲನೆ ನಡೆಸಿದರು.</p>.<p>ಖೇಲೊ ಭಾರತ್ ಯೋಜನೆಯಡಿ ಕ್ರೀಡಾ ಗ್ರಾಮ ನಿರ್ಮಾಣಕ್ಕಾಗಿ ಭೂವನಹಳ್ಳಿ, ಕಲ್ಲುಕೋಟೆಯ ವಿವಿಧೆಡೆ ಸುಮಾರು 100 ಎಕರೆ ಜಮೀನು ಇದ್ದು, ಅಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅನುಕೂಲವಾಗುವಷ್ಟು ಜಮೀನು ನೀಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಜಯಚಂದ್ರ ಹೇಳಿದರು.</p>.<p>ಗ್ರಾಮೀಣ ಭಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾದರೆ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ಅನುಕೂಲವಾಗುವುದು. ಶಿರಾ ರಾಜ್ಯದಲ್ಲಿ ಕೇಂದ್ರ ಸ್ಥಾನದಲ್ಲಿರುವುದರಿಂದ ಎಲ್ಲರಿಗೂ ಅನುಕೂಲವಾಗುವುದು. ಕ್ರೀಡಾಂಗಣಕ್ಕೆ ಬರಲು 100 ಅಡಿ ರಸ್ತೆ ನಿರ್ಮಾಣ ಮಾಡಲಾಗುವುದು. ಸಮೀಪದಲ್ಲಿಯೇ ರೈಲ್ವೆ ನಿಲ್ದಾಣ ಸಹ ನಿರ್ಮಾಣವಾಗಲಿದೆ ಎಂದು ಮಾಹಿತಿ ನೀಡಿದರು.</p>.<p>ಕೆ.ಎಸ್.ಸಿ.ಎ ಅಧ್ಯಕ್ಷ ರಘುರಾಮ್ ಭಟ್ ಮಾತನಾಡಿ, ಕ್ರೀಡಾಂಗಣ ನಿರ್ಮಿಸಲು ಈ ಸ್ಥಳ ಸೂಕ್ತವಾಗಿದೆ. ಮುಂದಿನ ವಾರ ಕೆ.ಎಸ್.ಸಿ.ಎ ಎಂಜಿನಿಯರ್ಗಳ ತಂಡ ಬಂದು ವರದಿ ಕೊಟ್ಟ ಬಳಿಕ ಮುಂದಿನ ಪ್ರಕ್ರಿಯೆ ಆರಂಭಿಸಲಾಗುವುದು. ಶಾಸಕರು ಜಮೀನು ನೀಡಲು ಉತ್ಸುಕರಾಗಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ನಗರದ ಹೊರವಲಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಸಲುವಾಗಿ ಕೆ.ಎಸ್.ಸಿ.ಎ ಪ್ರತಿನಿಧಿಗಳ ಜೊತೆ ಶಾಸಕ ಟಿ.ಬಿ.ಜಯಚಂದ್ರ ಮಂಗಳವಾರ ಪರಿಶೀಲನೆ ನಡೆಸಿದರು.</p>.<p>ಖೇಲೊ ಭಾರತ್ ಯೋಜನೆಯಡಿ ಕ್ರೀಡಾ ಗ್ರಾಮ ನಿರ್ಮಾಣಕ್ಕಾಗಿ ಭೂವನಹಳ್ಳಿ, ಕಲ್ಲುಕೋಟೆಯ ವಿವಿಧೆಡೆ ಸುಮಾರು 100 ಎಕರೆ ಜಮೀನು ಇದ್ದು, ಅಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅನುಕೂಲವಾಗುವಷ್ಟು ಜಮೀನು ನೀಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಜಯಚಂದ್ರ ಹೇಳಿದರು.</p>.<p>ಗ್ರಾಮೀಣ ಭಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾದರೆ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ಅನುಕೂಲವಾಗುವುದು. ಶಿರಾ ರಾಜ್ಯದಲ್ಲಿ ಕೇಂದ್ರ ಸ್ಥಾನದಲ್ಲಿರುವುದರಿಂದ ಎಲ್ಲರಿಗೂ ಅನುಕೂಲವಾಗುವುದು. ಕ್ರೀಡಾಂಗಣಕ್ಕೆ ಬರಲು 100 ಅಡಿ ರಸ್ತೆ ನಿರ್ಮಾಣ ಮಾಡಲಾಗುವುದು. ಸಮೀಪದಲ್ಲಿಯೇ ರೈಲ್ವೆ ನಿಲ್ದಾಣ ಸಹ ನಿರ್ಮಾಣವಾಗಲಿದೆ ಎಂದು ಮಾಹಿತಿ ನೀಡಿದರು.</p>.<p>ಕೆ.ಎಸ್.ಸಿ.ಎ ಅಧ್ಯಕ್ಷ ರಘುರಾಮ್ ಭಟ್ ಮಾತನಾಡಿ, ಕ್ರೀಡಾಂಗಣ ನಿರ್ಮಿಸಲು ಈ ಸ್ಥಳ ಸೂಕ್ತವಾಗಿದೆ. ಮುಂದಿನ ವಾರ ಕೆ.ಎಸ್.ಸಿ.ಎ ಎಂಜಿನಿಯರ್ಗಳ ತಂಡ ಬಂದು ವರದಿ ಕೊಟ್ಟ ಬಳಿಕ ಮುಂದಿನ ಪ್ರಕ್ರಿಯೆ ಆರಂಭಿಸಲಾಗುವುದು. ಶಾಸಕರು ಜಮೀನು ನೀಡಲು ಉತ್ಸುಕರಾಗಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>