ಕೆ.ಬಿ.ಕ್ರಾಸ್ ಬಳಿಯಿಂದ ಜಯಚಾಮರಾಜಪುರ ಗ್ರಾಮದ ಬಳಿ ರಸ್ತೆ ಅಭಿವೃದ್ಧಿಗಾಗಿ ಒಂದೂವರೆ ತಿಂಗಳ ಹಿಂದೆಯೇ ಸುಸ್ಥಿತಿಯಲ್ಲಿದ್ದ ರಸ್ತೆಯನ್ನು ಕಿತ್ತು ಹಾಕಲಾಗಿದೆ. ಆದರೆ, ಇಲ್ಲಿವರೆಗೂ ಕಾಮಗಾರಿಯನ್ನು ಪ್ರಾರಂಭಿಸಿಲ್ಲ. ಇದರಿಂದ ಜನರು ದಿನವೂ ಬಿದ್ದು– ಎದ್ದು ಸಾಗುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದರಂತೂ ಈ ರಸ್ತೆಯಲ್ಲಿ ಓಡಾಡುವುದು ಕಷ್ಟಕರ.