<p><strong>ತುಮಕೂರು</strong>: ಲಾಕ್ಡೌನ್ನಿಂದ ನಗರ ವಂಚಿತ ಸಮುದಾಯಗಳು ಸಂಕಷ್ಟಕ್ಕೆ ಒಳಗಾಗಿವೆ. ಈ ಹಿನ್ನೆಲೆಯಲ್ಲಿ ಯಥಾಸ್ಥಿತಿ ಬರುವವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ರೀತಿಯ ತೆರಿಗೆಗಳನ್ನು ವಿಧಿಸಬಾರದು ಎಂದು ಪಿಯುಸಿಎಲ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ದೊರೈರಾಜ್ ಆಗ್ರಹಿಸಿದರು.</p>.<p>ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ಪಿಯುಸಿಎಲ್ ಮತ್ತು ಪುಡ್ ಫಾರ್ ದಿ ಅಂಗ್ರಿ ಫೌಂಡೇಷ್ನ್ನಿಂದ ನಗರದ ವಿವಿಧ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಮುದಾಯಗಳಿಗೆ ಸೋಮವಾರ ಆಹಾರ ಕಿಟ್ಗಳನ್ನು ವಿತರಿಸಿ ಮಾತನಾಡಿದರು.</p>.<p>ಇತ್ತೀಚೆಗೆ ವಿದ್ಯುತ್ ಬಿಲ್ ಹೆಚ್ಚಳ ಮತ್ತು ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿರುವುದು ಖಂಡನೀಯ. ಸಮಾಜಕ್ಕೆ ಅಗತ್ಯವಿರುವ ಕೆಲಸಗಳನ್ನು ಮಾಡುತ್ತ ಜಾತಿ ಹಿನ್ನೆಲೆಯಲ್ಲಿ ತಾರತಮ್ಯಕ್ಕೆ ಒಳಗಾದ ವರ್ಗಗಳನ್ನು ಸರ್ಕಾರಗಳು ನಿರ್ಲಕ್ಷಿಸಿವೆ ಎಂದು ದೂರಿದರು.</p>.<p>ವಿಶ್ವವನ್ನು ಕಾಡುತ್ತಿರುವ ಕೊರೊನಾ ಸೋಂಕಿನ ಬಗ್ಗೆ ಅರಿಯುವುದರ ಜತೆಗೆ ಎಚ್ಚರಿಕೆಯಿಂದ ಇರಬೇಕು. ವೈಜ್ಞಾನಿಕವಾಗಿ ಔಷಧಗಳನ್ನು ಪಡೆದು ಸ್ವಚ್ಛತೆಗೆ ಆದ್ಯತೆ ನೀಡಬೇಕು. ತಜ್ಞರು ಸೂಚಿಸುವ ಸಲಹೆಗಳನ್ನು ಪಾಲಿಸಬೇಕು ಎಂದರು.</p>.<p>ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಕೊಳೆಗೇರಿ ಸಮಿತಿಯ ಶೆಟ್ಟಾಳಯ್ಯ, ಶಂಕರಯ್ಯ, ಮೊಹಮ್ಮದ್ ಹಯಾತ್, ಧನಂಜಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಲಾಕ್ಡೌನ್ನಿಂದ ನಗರ ವಂಚಿತ ಸಮುದಾಯಗಳು ಸಂಕಷ್ಟಕ್ಕೆ ಒಳಗಾಗಿವೆ. ಈ ಹಿನ್ನೆಲೆಯಲ್ಲಿ ಯಥಾಸ್ಥಿತಿ ಬರುವವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ರೀತಿಯ ತೆರಿಗೆಗಳನ್ನು ವಿಧಿಸಬಾರದು ಎಂದು ಪಿಯುಸಿಎಲ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ದೊರೈರಾಜ್ ಆಗ್ರಹಿಸಿದರು.</p>.<p>ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ಪಿಯುಸಿಎಲ್ ಮತ್ತು ಪುಡ್ ಫಾರ್ ದಿ ಅಂಗ್ರಿ ಫೌಂಡೇಷ್ನ್ನಿಂದ ನಗರದ ವಿವಿಧ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಮುದಾಯಗಳಿಗೆ ಸೋಮವಾರ ಆಹಾರ ಕಿಟ್ಗಳನ್ನು ವಿತರಿಸಿ ಮಾತನಾಡಿದರು.</p>.<p>ಇತ್ತೀಚೆಗೆ ವಿದ್ಯುತ್ ಬಿಲ್ ಹೆಚ್ಚಳ ಮತ್ತು ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿರುವುದು ಖಂಡನೀಯ. ಸಮಾಜಕ್ಕೆ ಅಗತ್ಯವಿರುವ ಕೆಲಸಗಳನ್ನು ಮಾಡುತ್ತ ಜಾತಿ ಹಿನ್ನೆಲೆಯಲ್ಲಿ ತಾರತಮ್ಯಕ್ಕೆ ಒಳಗಾದ ವರ್ಗಗಳನ್ನು ಸರ್ಕಾರಗಳು ನಿರ್ಲಕ್ಷಿಸಿವೆ ಎಂದು ದೂರಿದರು.</p>.<p>ವಿಶ್ವವನ್ನು ಕಾಡುತ್ತಿರುವ ಕೊರೊನಾ ಸೋಂಕಿನ ಬಗ್ಗೆ ಅರಿಯುವುದರ ಜತೆಗೆ ಎಚ್ಚರಿಕೆಯಿಂದ ಇರಬೇಕು. ವೈಜ್ಞಾನಿಕವಾಗಿ ಔಷಧಗಳನ್ನು ಪಡೆದು ಸ್ವಚ್ಛತೆಗೆ ಆದ್ಯತೆ ನೀಡಬೇಕು. ತಜ್ಞರು ಸೂಚಿಸುವ ಸಲಹೆಗಳನ್ನು ಪಾಲಿಸಬೇಕು ಎಂದರು.</p>.<p>ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಕೊಳೆಗೇರಿ ಸಮಿತಿಯ ಶೆಟ್ಟಾಳಯ್ಯ, ಶಂಕರಯ್ಯ, ಮೊಹಮ್ಮದ್ ಹಯಾತ್, ಧನಂಜಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>