<p><strong>ತುಮಕೂರು:</strong> ನಗರದ 7ನೇ ವಾರ್ಡ್ನ ಅಗ್ರಹಾರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹೊಸದಾಗಿ ನಿರ್ಮಿಸಲಾಗಿರುವ ಸ್ಮಾರ್ಟ್ ಕ್ಲಾಸ್ ತರಗತಿ ಕೊಠಡಿ ಹಾಗೂ ಎರಡು ಕಟ್ಟಡಗಳನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ಉದ್ಘಾಟಿಸಿದರು.</p>.<p>ಸರ್ಕಾರದಿಂದಲೇ ಎಲ್ಲ ಸೌಲಭ್ಯಗಳನ್ನು ಒದಗಿಸಲು ಆಗುವುದಿಲ್ಲ. ಪೋಷಕರು ಹಾಗೂ ಎಸ್ಡಿಎಂಸಿ ಸಮಿತಿ ಸದಸ್ಯರು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಾನಿಗಳು ಕೈಜೋಡಿಸಿದರೆ ಶಾಲೆ ಅಭಿವೃದ್ಧಿ ಆಗುತ್ತದೆ ಎಂದು ಹೇಳಿದರು.</p>.<p>4ನೇ ವಾರ್ಡ್, 7ನೇ ವಾರ್ಡ್ ಹಾಗೂ ದಿಬ್ಬೂರು ಭಾಗದ ವಿದ್ಯಾರ್ಥಿಗಳಿಗೆ ಈ ಶಾಲೆಯೇ ಕೇಂದ್ರವಾಗಿದೆ. ಎಲ್ಲರೂ ಒಂದಾಗಿ ಈ ವಿದ್ಯಾಕೇಂದ್ರವನ್ನು ಮಾದರಿ ಶಾಲೆಯನ್ನಾಗಿ ಮಾಡಲು ಕಾರ್ಯೋನ್ಮುಖರಾಗಬೇಕು ಸಲಹೆ ನೀಡಿದರು.</p>.<p>ದಾನಿಗಳಿಂದ ಹೆಚ್ಚಿನ ನೆರವು ಪಡೆಯುವುದರ ಜೊತೆ ಸರ್ಕಾರಿ ಅನುದಾನವನ್ನು ಸಹ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಗುಣಮಟ್ಟವನ್ನು ಕಾಯ್ದುಕೊಳ್ಳಬಹುದಾಗಿದೆ. ಲೋಕೋಪಯೋಗಿ ಅನುದಾನದಲ್ಲಿ ಬಿಇಒ ಹಾಗೂ ಡಿಡಿಪಿಐ ಅವರ ಮನವಿಯಂತೆ ಈ ಶಾಲೆಯಲ್ಲಿ ಹೊಸದಾಗಿ 2 ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.</p>.<p>ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್ಡಿಎಂಸಿ) ಅಧ್ಯಕ್ಷೆ ನಂಜುಂಡೇಶ್ವರಿ, ಮಕ್ಕಳಿಗೆ ಶಾಲೆಯಲ್ಲಿ ಉತ್ತಮ ಪರಿಸರವನ್ನು ನಿರ್ಮಿಸಲು ಕ್ರಮ ವಹಿಸಿ ಎಂದು ಶಾಸಕರಿಗೆ ಮನವಿ ಮಾಡಿದರು.</p>.<p>ಶಾಲೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ಎಸ್ಡಿಎಂಸಿ ಸಮಿತಿ ಒತ್ತು ನೀಡುತ್ತಿದೆ. ಮಕ್ಕಳಿಂದಲೇ ಶಾಲಾ ಆವರಣದಲ್ಲಿ ಮರಗಳನ್ನು ಬೆಳೆಸುವ ಮೂಲಕ ಪರಿಸರ ಜಾಗೃತಿಯನ್ನು ಮೂಡಿಸುತ್ತಿದೆ. ಈ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿ ಎಂದು ಶಾಸಕರಲ್ಲಿ ಮನವಿ ಮಾಡಿದರು.</p>.<p>ಬಿಇಒ ರಂಗಧಾಮಪ್ಪ, ಮುಖ್ಯಶಿಕ್ಷಕ ಎನ್.ಶಿವರಾಜ್, ಪಾಲಿಕೆ ಸದಸ್ಯರಾದ ಕುಮಾರ್, ದೀಪಶ್ರೀ ಮಹೇಶ್, ಸ್ಥಳೀಯರಾದ ಕೆ.ಎಚ್.ರಮೇಶ್, ಕೆ.ಚಂದ್ರಶೇಖರ್, ಬಸವರಾಜು, ನವೀನ್, ವಿನಯ್ಕುಮಾರ್, ನಯಾಜ್ ಅಹ್ಮದ್, ಜಗದೀಶ್, ಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದ 7ನೇ ವಾರ್ಡ್ನ ಅಗ್ರಹಾರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹೊಸದಾಗಿ ನಿರ್ಮಿಸಲಾಗಿರುವ ಸ್ಮಾರ್ಟ್ ಕ್ಲಾಸ್ ತರಗತಿ ಕೊಠಡಿ ಹಾಗೂ ಎರಡು ಕಟ್ಟಡಗಳನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ಉದ್ಘಾಟಿಸಿದರು.</p>.<p>ಸರ್ಕಾರದಿಂದಲೇ ಎಲ್ಲ ಸೌಲಭ್ಯಗಳನ್ನು ಒದಗಿಸಲು ಆಗುವುದಿಲ್ಲ. ಪೋಷಕರು ಹಾಗೂ ಎಸ್ಡಿಎಂಸಿ ಸಮಿತಿ ಸದಸ್ಯರು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಾನಿಗಳು ಕೈಜೋಡಿಸಿದರೆ ಶಾಲೆ ಅಭಿವೃದ್ಧಿ ಆಗುತ್ತದೆ ಎಂದು ಹೇಳಿದರು.</p>.<p>4ನೇ ವಾರ್ಡ್, 7ನೇ ವಾರ್ಡ್ ಹಾಗೂ ದಿಬ್ಬೂರು ಭಾಗದ ವಿದ್ಯಾರ್ಥಿಗಳಿಗೆ ಈ ಶಾಲೆಯೇ ಕೇಂದ್ರವಾಗಿದೆ. ಎಲ್ಲರೂ ಒಂದಾಗಿ ಈ ವಿದ್ಯಾಕೇಂದ್ರವನ್ನು ಮಾದರಿ ಶಾಲೆಯನ್ನಾಗಿ ಮಾಡಲು ಕಾರ್ಯೋನ್ಮುಖರಾಗಬೇಕು ಸಲಹೆ ನೀಡಿದರು.</p>.<p>ದಾನಿಗಳಿಂದ ಹೆಚ್ಚಿನ ನೆರವು ಪಡೆಯುವುದರ ಜೊತೆ ಸರ್ಕಾರಿ ಅನುದಾನವನ್ನು ಸಹ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಗುಣಮಟ್ಟವನ್ನು ಕಾಯ್ದುಕೊಳ್ಳಬಹುದಾಗಿದೆ. ಲೋಕೋಪಯೋಗಿ ಅನುದಾನದಲ್ಲಿ ಬಿಇಒ ಹಾಗೂ ಡಿಡಿಪಿಐ ಅವರ ಮನವಿಯಂತೆ ಈ ಶಾಲೆಯಲ್ಲಿ ಹೊಸದಾಗಿ 2 ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.</p>.<p>ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್ಡಿಎಂಸಿ) ಅಧ್ಯಕ್ಷೆ ನಂಜುಂಡೇಶ್ವರಿ, ಮಕ್ಕಳಿಗೆ ಶಾಲೆಯಲ್ಲಿ ಉತ್ತಮ ಪರಿಸರವನ್ನು ನಿರ್ಮಿಸಲು ಕ್ರಮ ವಹಿಸಿ ಎಂದು ಶಾಸಕರಿಗೆ ಮನವಿ ಮಾಡಿದರು.</p>.<p>ಶಾಲೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ಎಸ್ಡಿಎಂಸಿ ಸಮಿತಿ ಒತ್ತು ನೀಡುತ್ತಿದೆ. ಮಕ್ಕಳಿಂದಲೇ ಶಾಲಾ ಆವರಣದಲ್ಲಿ ಮರಗಳನ್ನು ಬೆಳೆಸುವ ಮೂಲಕ ಪರಿಸರ ಜಾಗೃತಿಯನ್ನು ಮೂಡಿಸುತ್ತಿದೆ. ಈ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿ ಎಂದು ಶಾಸಕರಲ್ಲಿ ಮನವಿ ಮಾಡಿದರು.</p>.<p>ಬಿಇಒ ರಂಗಧಾಮಪ್ಪ, ಮುಖ್ಯಶಿಕ್ಷಕ ಎನ್.ಶಿವರಾಜ್, ಪಾಲಿಕೆ ಸದಸ್ಯರಾದ ಕುಮಾರ್, ದೀಪಶ್ರೀ ಮಹೇಶ್, ಸ್ಥಳೀಯರಾದ ಕೆ.ಎಚ್.ರಮೇಶ್, ಕೆ.ಚಂದ್ರಶೇಖರ್, ಬಸವರಾಜು, ನವೀನ್, ವಿನಯ್ಕುಮಾರ್, ನಯಾಜ್ ಅಹ್ಮದ್, ಜಗದೀಶ್, ಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>