<p><strong>ತುಮಕೂರು</strong>: ಆಸ್ತಿ ಅಕ್ರಮ ಸಂಪಾದನೆ ದೃಢಪಟ್ಟ ತುಮ ಕೂರಿನ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ (ಹಿಂದಿನ) ಆರ್.ಸುಬ್ರಹ್ಮಣ್ಯ ಎಂಬುವವರಿಗೆ ₹2.32 ಕೋಟಿ ದಂಡ ಹಾಗೂ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.</p><p>2016ರಲ್ಲಿ ಅಂದಿನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ತುಮಕೂರಿನ ಕುವೆಂಪು ನಗರದ ಮನೆ, ಕಚೇರಿ ಹಾಗೂ ಮತ್ತಿತರ ಕಡೆಗಳಲ್ಲಿ ದಾಳಿ ನಡೆಸಿದ್ದರು. ಸುಬ್ರಹ್ಮಣ್ಯ ಹಾಗೂ ಅವರ ಕುಟುಂಬದವರ ಹೆಸರಿನಲ್ಲಿ ₹1.21ಕೋಟಿ ಆಸ್ತಿಯನ್ನು ಅಕ್ರಮವಾಗಿ ಹೊಂದಿರುವುದನ್ನು ಪತ್ತೆ ಮಾಡಿದ್ದರು. ನಂತರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.</p><p>7ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ (ಲೋಕಾಯುಕ್ತ ವಿಶೇಷ ನ್ಯಾಯಾಲಯ) ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ಅವರು ವಿಚಾರಣೆ ನಡೆಸಿದರು. ಆರೋಪಿ ಸುಬ್ರಹ್ಮಣ್ಯ ಹಾಗೂ ಕುಟುಂಬದವರು ನಿಗದಿತ ಆದಾಯಕ್ಕಿಂತ ₹1.16ಕೋಟಿ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿರುವುದು ವಿಚಾರಣೆ ಸಮಯದಲ್ಲಿ ದೃಢಪಟ್ಟಿರುವುದಾಗಿ ಪ್ರಕಟಿಸಿದರು. ಅಕ್ರಮವಾಗಿ ಸಂಪಾದಿಸಿರುವ ಆಸ್ತಿಯ ಎರಡು ಪಟ್ಟು ₹2.32 ಕೋಟಿ ವಸೂಲಿ ಮಾಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.</p><p>ಲೋಕಾಯುಕ್ತರ ಪರವಾಗಿ ಎನ್.ಬಿ.ಬಸವರಾಜು ವಾದ ಮಂಡಿಸಿದರು. ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಹಾಲಪ್ಪ, ಜೆ.ರಮೇಶ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p><p>ಸುಬ್ರಹ್ಮಣ್ಯ ಅವರನ್ನು ವಶಕ್ಕೆ ಪಡೆದು ಜೈಲಿಗೆ ಕಳುಹಿಸಲಾಗಿದೆ. ಪ್ರಸ್ತುತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಆಸ್ತಿ ಅಕ್ರಮ ಸಂಪಾದನೆ ದೃಢಪಟ್ಟ ತುಮ ಕೂರಿನ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ (ಹಿಂದಿನ) ಆರ್.ಸುಬ್ರಹ್ಮಣ್ಯ ಎಂಬುವವರಿಗೆ ₹2.32 ಕೋಟಿ ದಂಡ ಹಾಗೂ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.</p><p>2016ರಲ್ಲಿ ಅಂದಿನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ತುಮಕೂರಿನ ಕುವೆಂಪು ನಗರದ ಮನೆ, ಕಚೇರಿ ಹಾಗೂ ಮತ್ತಿತರ ಕಡೆಗಳಲ್ಲಿ ದಾಳಿ ನಡೆಸಿದ್ದರು. ಸುಬ್ರಹ್ಮಣ್ಯ ಹಾಗೂ ಅವರ ಕುಟುಂಬದವರ ಹೆಸರಿನಲ್ಲಿ ₹1.21ಕೋಟಿ ಆಸ್ತಿಯನ್ನು ಅಕ್ರಮವಾಗಿ ಹೊಂದಿರುವುದನ್ನು ಪತ್ತೆ ಮಾಡಿದ್ದರು. ನಂತರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.</p><p>7ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ (ಲೋಕಾಯುಕ್ತ ವಿಶೇಷ ನ್ಯಾಯಾಲಯ) ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ಅವರು ವಿಚಾರಣೆ ನಡೆಸಿದರು. ಆರೋಪಿ ಸುಬ್ರಹ್ಮಣ್ಯ ಹಾಗೂ ಕುಟುಂಬದವರು ನಿಗದಿತ ಆದಾಯಕ್ಕಿಂತ ₹1.16ಕೋಟಿ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿರುವುದು ವಿಚಾರಣೆ ಸಮಯದಲ್ಲಿ ದೃಢಪಟ್ಟಿರುವುದಾಗಿ ಪ್ರಕಟಿಸಿದರು. ಅಕ್ರಮವಾಗಿ ಸಂಪಾದಿಸಿರುವ ಆಸ್ತಿಯ ಎರಡು ಪಟ್ಟು ₹2.32 ಕೋಟಿ ವಸೂಲಿ ಮಾಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.</p><p>ಲೋಕಾಯುಕ್ತರ ಪರವಾಗಿ ಎನ್.ಬಿ.ಬಸವರಾಜು ವಾದ ಮಂಡಿಸಿದರು. ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಹಾಲಪ್ಪ, ಜೆ.ರಮೇಶ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p><p>ಸುಬ್ರಹ್ಮಣ್ಯ ಅವರನ್ನು ವಶಕ್ಕೆ ಪಡೆದು ಜೈಲಿಗೆ ಕಳುಹಿಸಲಾಗಿದೆ. ಪ್ರಸ್ತುತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>